ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಕೆಲ ಅಧಿಕಾರಿಗಳಿಗೆ ನಡುಕ ಶುರು

ಬೆಂಗಳೂರು,ಡಿ.7- ಬಿಬಿಎಂಪಿ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿನ ಲೋಪ ದೋಷ ಪತ್ತೆ ಹಚ್ಚುವ ಕಾರ್ಯ ಆರಂಭವಾಗಿದ್ದು, ಅಕ್ರಮಕ್ಕೆ ಸಾಥ್ ನೀಡಿರುವ ಕೆಲ ಅಧಿಕಾರಿಗಳು ಮತ್ತು ಅವರಿಗೆ ಬೆಂಬಲವಾಗಿ ನಿಂತಿದ್ದ ಕೆಲವು ರಾಜಕೀಯ ಮುಖಂಡರ ಎದೆಯಲ್ಲಿ ನಡುಕ ಶುರುವಾಗಿದೆ. ಕೆಲ ರಾಜಕಾರಣಿಗಳ ಸೂಚನೆ ಮೇರೆಗೆ ನಗರದ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಿಂದ ಕೆಲವು ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಕುರಿತಂತೆ ಚುನಾವಣಾ ಆಯೋಗ ಇಂದಿನಿಂದ ತನಿಖೆ ಆರಂಭಿಸಿರುವುದು ಕೆಲ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಅದರಲ್ಲೂ […]
ಮತದಾರರ ಮಾಹಿತಿ ಕಳವು: ಸರ್ಕಾರೇತರ ಸಂಸ್ಥೆಗಳ ಮೇಲೆ ಅನುಮಾನದ ಹುತ್ತ..!

ಬೆಂಗಳೂರು,ಸೆ.30- ಮತದಾರರ ಮಾಹಿತಿ ಕಳುವು ಪ್ರಕರಣಗಳಿಗೆ ಸರ್ಕಾರೇತರ ಸಂಸ್ಥೆಗಳೇ ಪ್ರಮುಖ ಕಾರಣ ಎಂಬ ಆರೋಪಗಳು ಕೇಳಿ ಬಂದಿವೆ. ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಸ್ವೀಪ್ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಹುತೇಕ ಸರ್ಕಾರೇತರ ಸಂಸ್ಥೆಗಳು ಮತದಾರರ ಮಾಹಿತಿ ಕಳುವು ಮಾಡುವ ಉದ್ದೇಶಗಳನ್ನು ಹೊಂದಿರುತ್ತವೆ ಎಂದು ಬಿಬಿಎಂಪಿಯ ಹಿರಿಯ ಕಂದಾಯಾಧಿಕಾರಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಇಂತಹ ಕಾರ್ಯಕ್ಕೆ ಚಿಲುಮೆ ಸಂಸ್ಥೆ ಯೊಂದೇ ಕೈ ಹಾಕಿಲ್ಲ. ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಹಲವಾರು ಸರ್ಕಾರೇತರ ಸಂಸ್ಥೆಗಳು ಇಂತಹ ದ್ರೋಹ ಮಾಡಿವೆ ಎಂದು […]
ವೋಟರ್ ಐಡಿ ಹಗರಣ: ಬಿಬಿಎಂಪಿ ಮುಖ್ಯ ಆಯುಕ್ತರ ಎತ್ತಂಗಡಿ ಸಾಧ್ಯತೆ

ಬೆಂಗಳೂರು,ನ.29- ಮತದಾರರ ಪಟ್ಟಿ ಅಕ್ರಮ ಹಗರಣ ವ್ಯಾಪಕ ಸದ್ದು ಮಾಡುತ್ತಿದ್ದಂತೆ ಬಿಬಿಎಂಪಿಯಲ್ಲಿ ಆಯುಕ್ತರ ತಲೆ ದಂಡಕ್ಕೆ ಕ್ಷಣಗಣನೆಗಳು ಶುರುವಾಗಿವೆ. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಎತ್ತಂಗಡಿ ಮಾಡಿ ಸಮರ್ಥ ಅಧಿಕಾರಿಗಳನ್ನು ನೇಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಬಿಬಿಎಂಪಿಯ ಅಪರ ಚುನಾವಣಾಧಿಕಾರಿಗಳಾಗಿರು ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದ್ದು, ಹಲವರನ್ನು ವಿಚಾರಣೆಗೊಳಪಡಿಸಲಾಗಿದೆ. ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಯಶಸ್ವಿಯಾಗಿ ಅಧಿಕಾರ ನಡೆಸಿದ್ದ ಮಂಜುನಾಥ್, ಗೌರವ್ಗುಪ್ತ ಅಥವಾ ರಾಜೇಶ್ ಗೌಡ ಅವರಲ್ಲಿ ಒಬ್ಬರನ್ನು […]
ವೋಟರ್ ಐಡಿ ಹಗರಣ : ಹಣಕಾಸು ವಹಿವಾಟಿನ ಬಗ್ಗೆ ತನಿಖೆ ತೀವ್ರ

ಬೆಂಗಳೂರು, ನ.27-ಮತದಾರರ ಪಟ್ಟಿ ಅಕ್ರಮದಲ್ಲಿ ಈವರೆಗೂ 11 ಮಂದಿ ಬಂಧನವಾಗಿದ್ದು, ಪೊಲೀಸರು ಹಗರಣದಲ್ಲಿನ ಹಣಕಾಸು ವಹಿವಾಟಿನ ಬಗ್ಗೆ ಮಾಹಿತಿ ಕಲೆಹಾಕಲಾರಂಭಿಸಿದ್ದಾರೆ. ಚುನಾವಣಾ ಆಯೋಗದ ಉಸ್ತುವಾರಿಯಲ್ಲಿ ನಡೆಯುತ್ತಿರುವ ತನಿಖೆ ದಿನೇ ದಿನೇ ಗಂಭೀರತೆ ಪಡೆದುಕೊಳ್ಳುತ್ತಿದೆ. ಹಗರಣದಲ್ಲಿ ಪ್ರಮುಖವಾಗಿ ಕೇಳಿ ಬಂದ ಚಿಲುಮೆ ಸಂಸ್ಥೆಯ ಮುಖ್ಯಸ್ಥರು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ನಿನ್ನೆ ಬಿಬಿಎಂಪಿ ನಾಲ್ಕು ಮಂದಿ ಚುನಾವಣಾಕಾರಿ(ಆರ್ಒ) ಮತ್ತು ಒಬ್ಬ ಮಧ್ಯವರ್ತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಚಿಲುಮೆ ಸಂಸ್ಥೆ ತನ್ನ ಸಿಬ್ಬಂದಿಗಳಿಂದ ಮತದಾರರ ಮಾಹಿತಿ ಸಂಗ್ರಹಿಸಲು ಅನುಕೂಲ ಮಾಡಿಕೊಡುವ ಸಲುವಾಗಿ […]
ವೋಟರ್ ಡಾಟಾ ಹಗರಣದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ : ಸಿಎಂ

ಬೆಂಗಳೂರು,ನ.26- ಮತದಾರರಗುರುತಿನ ಚೀಟಿ ಪರಿಷ್ಕರಣೆ ಪ್ರಕರಣದಲ್ಲಿ ಯಾವುದೇ ಅಧಿಕಾರಿಗಳು ಭಾಗಿಯಾಗಿದ್ದರೆ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಐಎಎಸ್ ಇರಲಿ ಅಥವಾ ಇನ್ಯಾವುದೇ ಅಧಿಕಾರಿ ಇರಲಿ ಕಾನೂನು ಮುಂದೆ ಎಲ್ಲರೂ ಒಂದೇ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಕೆಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಚುನಾವಣಾ […]
ಬಿಬಿಎಂಪಿ ಆಂತರಿಕ ತನಿಖೆಯಲ್ಲೂ ಬಯಲಾಯ್ತು ‘ಚಿಲುಮೆ’ ಅಕ್ರಮ

ಬೆಂಗಳೂರು,ನ.26- ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮಗಳು ಬಿಬಿಎಂಪಿ ನಡೆಸಿದ ಆಂತರಿಕ ತನಿಖೆಯಲ್ಲೂ ಸ್ಪಷ್ಟವಾಗಿದೆ. ತನಿಖೆ ನಡೆಸಿದ ಬಿಬಿಎಂಪಿ ಹಿರಿಯ ಅಧಿಕಾರಿಗಳು ಬಿಎಲ್ಓಗಳು ನೀಡಿದ ಉತ್ತರ ಕೇಳಿ ಶಾಕ್ ಆಗಿದ್ದಾರೆ. ಅದೇನು ಅಂದರೆ ನೀವೂ ಬೆಚ್ಚಿ ಬೀಳೋದು ಗ್ಯಾರಂಟಿ. ಅದೇನು ಅಂತೀರಾ… ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಚಿಲುಮೆ ಸಂಸ್ಥೆಯವರು ಎಸಿ ರೂಮಿನಲ್ಲಿ ಕುಳಿತುಕೊಂಡೇ ಮಾಡುತ್ತಿದ್ದರಂತೆ. ಅದರಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ಕ್ಷಣ ಮಾತ್ರದಲ್ಲಿ ಆಗುತ್ತಿತ್ತು. ಕೇವಲ ಒಂದು ಬಟನ್ ಒತ್ತುವ ಮೂಲಕ ಮತದಾರರ ಹೆಸರುಗಳನ್ನು ಕ್ಷಣ ಮಾತ್ರದಲ್ಲಿ […]
ಮತದಾರರ ಪಟ್ಟಿ ಮರು ಪರಿಷ್ಕರಣೆಗೆ ಡಿಕೆಶಿ ಆಗ್ರಹ

ಬೆಂಗಳೂರು, ನ.26- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದರಿಂದ ಮರು ಪರಿಷ್ಕರಣೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಮಾಹಿತಿ ಕಳವು ವಿಚಾರವಾಗಿ ಕಾಂಗ್ರೆಸ್ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗವು ಹಿರಿಯ ಚುನಾವಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ನಾನು ಆಯೋಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಮೇಲಿನವರ ಆದೇಶದ ಮೇರೆಗೆ ನಾವು ಕೆಲಸ ಮಾಡಿದ್ದೇವೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ. ಈ ಆದೇಶ ಕೊಟ್ಟವರು ಯಾರು ಎಂಬುದು ಗೊತ್ತಾಗಬೇಕಿದೆ […]
ವೋಟರ್ ಡೇಟಾ ಅಕ್ರಮ ನಡೆದಿಲ್ಲ ಎಂದಾದರೆ IAS ಅಧಿಕಾರಿಗಳ ಅಮಾನತಾಗಿದ್ದೇಕೆ..?

ಬೆಂಗಳೂರು, ನ.26- ಮತದಾರರ ಪಟ್ಟಿಯಲ್ಲಿ ಅಕ್ರಮಗಳೇ ನಡೆದಿದ್ದ ಎಂದು ವಾದಿಸುತ್ತಿದ್ದ ಮುಖ್ಯಮಂತ್ರಿಯವರೆ, ಹಾಗಿದ್ದರೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು ಯಾಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಮತದಾರರ ಪಟ್ಟಿ ಅಕ್ರಮಗಳ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹಾಸ್ಯಾಸ್ಪದವಾಗಿವೆ. ಮೊದಲು ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸಲಾಗುತ್ತದೆ. ಹಗರಣ ಹೊರಬಂದನಂತರ ಇದೊಂದು ಸಣ್ಣ ಲೋಪ ಎಂಬಂತೆ ಮಾತಾಡುತ್ತದೆ. ಹಗರಣದ ತೀವ್ರತೆ ಹೊರಬಂದಾಗ ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುತ್ತದೆ. ಪಿಎಸ್ಐ […]
ಸಿಎಂ ಬೊಮ್ಮಾಯಿ ವಿರುದ್ದ ಕೇಸ್ ದಾಖಲಿಸುವಂತೆ ಸುರ್ಜೆವಾಲ ಒತ್ತಾಯ

ಬೆಂಗಳೂರು,ನ.26-ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿನ ಮತದಾರರ ಪಟ್ಟಿಯ ಅಕ್ರಮಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕಾಂಗ್ರೆಸ್ ವತಿಯಿಂದ ನೀಡಲಾದ ದೂರಿನ ಮೇಲೆ ಚುನಾವಣಾ ಆಯೋಗ ತ್ವರಿತ ಕ್ರಮ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ ತನಿಖೆಯನ್ನು ಕೇವಲ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ, ಮತದಾರರ […]
ಅಕ್ರಮದ ನಡುವೆಯೆ ‘ಚಿಲುಮೆ’ಯಿಂದ ಟೆಂಡರ್ ಲಾಬಿ

ಬೆಂಗಳೂರು, ನ.25- ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಟೀಕೆಗೆ ಗುರಿಯಾಗಿರುವ ಚಿಲುಮೆ ಸಂಸ್ಥೆ ತನ್ನ ಮೇಲಿನ ಆರೋಪದ ಹೊರತಾಗಿಯೂ ಮತ್ತೊಂದು ಟೆಂಡರ್ ಪಡೆಯಲು ಲಾಬಿ ನಡೆಸಿರುವುದು ಬೆಳಕಿಗೆ ಬಂದಿದೆ.ಬಿಬಿಎಂಪಿ ವತಿಯಿಂದ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕಲ್ಯಾಣ ಸಮಿತಿ ವಿಭಾಗ ಈ ಕುರಿತು ಟೆಂಡರ್ ಅನ್ನು ಆಹ್ವಾನಿಸಿದೆ. ಚಿಲುಮೆ ಸಂಸ್ಥೆ ಟೆಂಡರ್ ಗೆ ಬಿಡ್ ಸಲ್ಲಿಸಿದ್ದು, ಗುತ್ತಿಗೆ ಪಡೆದುಕೊಳ್ಳಲು ಹರಸಾಹಸ ನಡೆಸಿದೆ. ಬಿಬಿಎಂಪಿ ಮುಖ್ಯ ಆಯುಕ್ತರೂ ಸೇರಿದಂತೆ ಭಾರಿ ಪ್ರಭಾವ ಬಳಸಿ ಟೆಂಡರ್ ಗಿಟ್ಟಿಸುವ ಯತ್ನ […]