ಬಿಜೆಪಿಗೆ ಅನೇಕ ಕ್ಷೇತ್ರಗಳಲ್ಲಿ ಕಾಡುತ್ತಿದೆ ಆಕಾಂಕ್ಷಿಗಳ ಅತೃಪ್ತಿ ಭಯ

ಬೆಂಗಳೂರು,ಮಾ.21-ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿ ಮತ್ತೆ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿರುವ ಆಡಳಿತಾರೂಢ ಬಿಜೆಪಿಗೆ ಅನೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳೇ ತೊಡರುಗಾಲಾಗಿ ಪರಿಣಮಿಸಿದ್ದಾರೆ. ಸುಮಾರು 75ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ 2ರಿಂದ 5ಕ್ಕೂ ಹೆಚ್ಚು ಆಕಾಂಕ್ಷಿಗಳಿರುವುದರಿಂದ ಯಾರಿಗೆ ಟಿಕೆಟ್ ಕೊಟ್ಟರೂ ಅವಕಾಶ ವಂಚಿತರು ಪಕ್ಷದ ವಿರುದ್ಧ ತಿರುಗಿ ಬೀಳಬಹುದೆಂಬ ಆತಂಕ ಎದುರಾಗಿದೆ.ಈಗಾಗಲೇ ಜೆಡಿಎಸ್ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದರೆ ಕಾಂಗ್ರೆಸ್ ಯಾವುದೇ ಕ್ಷಣದಲ್ಲೂ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಂಭವವಿದೆ. ಬಿಜೆಪಿ ಕೂಡ ಹಾಲಿ ಶಾಸಕರು ಮತ್ತು […]
ಕೆಲವು ಶಾಸಕರಿಗೆ ಆತಂಕ ಮೂಡಿಸಿದೆ ಟಿಕೆಟ್ ಕುರಿತ ಬಿ.ಎಲ್.ಸಂತೋಷ್ ಹೇಳಿಕೆ

ಬೆಂಗಳೂರು,ನ.28- ಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆ ಇಲ್ಲವೇ ಎಂಬ ಚಿಂತೆ ಬೇಡ. ಮೊದಲು ಪಕ್ಷಕ್ಕಾಗಿ ದುಡಿಯಲು ಮುಂದಾಗಿ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿರುವುದು ಹಲವು ಶಾಸಕರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಪ್ರಶಿಕ್ಷಣ ಶಿಬಿರದಲ್ಲಿ ಸಂತೋಷ್ ಆಡಿರುವ ಈ ಮಾತು, ಕೆಲವು ಸಚಿವರು ಮತ್ತು ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆಯೇ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದ್ದಾರೆ ಎಂದೇ ಹೇಳಲಾಗುತ್ತಿದೆ. ಸಂತೋಷ್ ಅವರು ಏನೇ ಮಾತನಾಡಿದರೂ ಸಾಕಷ್ಟು ಅಳೆದುತೂಗಿ ಮಾತನಾಡುತ್ತಾರೆ. ಭವಿಷ್ಯದಲ್ಲಿ […]