ಬೆಂಗಳೂರು,ಜು.1- ಜಮೀನಿನ ಖಾತೆ ಮಾಡಿಕೊಡಲು ಲಂಚ ಪಡೆಯುವಾಗ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಡಿ.ಎ.ದಿವಾಕರ್ ಅವರನ್ನು ವಶಕ್ಕೆ ಪಡೆದಿರುವ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ನೆಲಮಂಗಲ ತಾಲ್ಲೂಕು ಗಿರಿಯನಪಾಳ್ಯದಲ್ಲಿ 8.20 ಎಕರೆ ಜಮೀನು ನ್ಯಾಯಾಲಯದ ಆದೇಶದಂತೆ ನೋಂದಣಿ ಮಾಡಿ ಖಾತೆ ಮಾಡಿಕೊಡಲು 2 ಲಕ್ಷ ಲಂಚದ ಬೇಡಿಕೆ ಇಡಲಾಗಿತ್ತು.
ನಂತರ 1.5 ಲಕ್ಷ ರೂಗೆ ಮಾತುಕತೆ ನಡೆದು ದೊಡ್ಡಬಳ್ಳಾಪುರದ ಶ್ರೀನಿಧಿ ಮೈಭವ್ ಹೋಟೆಲ್ ಬಳಿ ಕಾರಿನಲ್ಲಿ ದೂರುದಾರರಿಂದ ಹಣ ಪಡೆಯುವಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ರಮೇಶ್ ಮತ್ತಿತರರ ತಂಡ ರೆಡ್ಹ್ಯಾಂಡ್ ಆಗಿ ಗ್ರೇಡ್-2 ತಹಸೀಲ್ದಾರ್ ಡಿ.ದಿವಾಕರ್ ಸಿಕ್ಕಿಬಿದ್ದಿದ್ದಾರೆ.
- ಐದು ರಾಷ್ಟ್ರಗಳ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ, ಟೀಕಿಸಿದ ಕಾಂಗ್ರೆಸ್
- ರಾಜ್ಯದಲ್ಲಿ ಮೂರು ದಿನಗಳ ಕಾಲ ಸಾಧಾರಣ ಮಳೆ ನಿರೀಕ್ಷೆ
- ಬಿಎಸ್ಎಫ್ ಯೋಧನ ಪತ್ನಿ ಮೇಲೆ ಅತ್ಯಾಚಾರ
- ನನಗೆ ಮಂತ್ರಿಗಿರಿಯ ಆಸೆಯಿಲ್ಲ : ರಾಜುಕಾಗೆ
- ಕೋಲಾರದಲ್ಲಿ ರಾಜಕೀಯ ಕಾದಾಟ, ಶಾಸಕರ ನಡುವೆ ಬಹಿರಂಗ ವಾಕ್ಸಮರ