ಬೆಂಗಳೂರು,ಜು.1- ಜಮೀನಿನ ಖಾತೆ ಮಾಡಿಕೊಡಲು ಲಂಚ ಪಡೆಯುವಾಗ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಡಿ.ಎ.ದಿವಾಕರ್ ಅವರನ್ನು ವಶಕ್ಕೆ ಪಡೆದಿರುವ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ನೆಲಮಂಗಲ ತಾಲ್ಲೂಕು ಗಿರಿಯನಪಾಳ್ಯದಲ್ಲಿ 8.20 ಎಕರೆ ಜಮೀನು ನ್ಯಾಯಾಲಯದ ಆದೇಶದಂತೆ ನೋಂದಣಿ ಮಾಡಿ ಖಾತೆ ಮಾಡಿಕೊಡಲು 2 ಲಕ್ಷ ಲಂಚದ ಬೇಡಿಕೆ ಇಡಲಾಗಿತ್ತು.
ನಂತರ 1.5 ಲಕ್ಷ ರೂಗೆ ಮಾತುಕತೆ ನಡೆದು ದೊಡ್ಡಬಳ್ಳಾಪುರದ ಶ್ರೀನಿಧಿ ಮೈಭವ್ ಹೋಟೆಲ್ ಬಳಿ ಕಾರಿನಲ್ಲಿ ದೂರುದಾರರಿಂದ ಹಣ ಪಡೆಯುವಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ರಮೇಶ್ ಮತ್ತಿತರರ ತಂಡ ರೆಡ್ಹ್ಯಾಂಡ್ ಆಗಿ ಗ್ರೇಡ್-2 ತಹಸೀಲ್ದಾರ್ ಡಿ.ದಿವಾಕರ್ ಸಿಕ್ಕಿಬಿದ್ದಿದ್ದಾರೆ.
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ
- ಧರ್ಮಸ್ಥಳ ಅನಾಮಿಕನ ಪ್ರಕರಣ : ಎಸ್ಐಟಿಯಿಂದ ಮಧ್ಯಂತರ ವರದಿ