Thursday, May 2, 2024
Homeಜಿಲ್ಲಾ ಸುದ್ದಿಗಳುಪ್ರಧಾನಿ ಮೋದಿ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಕಾನ್ಸ್‌ಟೇಬಲ್‌ ಹೃದಯಾಘಾತದಿಂದ ನಿಧನ

ಪ್ರಧಾನಿ ಮೋದಿ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಕಾನ್ಸ್‌ಟೇಬಲ್‌ ಹೃದಯಾಘಾತದಿಂದ ನಿಧನ

ಹಾಸನ,ಏ.15- ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಕಾನ್ಸ್‍ಟೇಬಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೇಲೂರು ಪೊಲೀಸ್ ಠಾಣೆಯ ಸಿದ್ದಪ್ಪ (50) ಮೃತಪಟ್ಟ ಕಾನ್ಸ್‍ಟೇಬಲ್.

ಮೈಸೂರಿನಲ್ಲಿ ಆಯೋಜನೆಯಾಗಿದ್ದ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಕಾರ್ಯನಿಮಿತ್ತ ಬಂದೋಬಸ್ತ್‍ಗೆ ತೆರಳಿ ಮಧ್ಯರಾತ್ರಿ ಮನೆಗೆ ವಾಪಸ್ಸಾಗಿ ನಿದ್ರೆಗೆ ಜಾರಿದ್ದರು. ಈ ಸಮಯದಲ್ಲಿ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಎಷ್ಟು ಸಮಯವಾದರೂ ಸಿದ್ದಪ್ಪನವರು ಏಳದೇ ಇದ್ದುದನ್ನು ಕಂಡು ಅನುಮಾನಗೊಂಡು ಕುಟುಂಬ ಸದಸ್ಯರು ಎಬ್ಬಿಸಲು ಪ್ರಯತ್ನಿಸಿದರು. ಅಷ್ಟರಲ್ಲಿ ಅವರು ನಿಧನರಾಗಿರುವುದು ತಿಳಿದುಬಂದಿದೆ.

ಅಚಾನಕ್ ನಿಧನದಿಂದ ಕುಟುಂಬದವರಿಗೆ ಬರಸಿಡಿಲು ಬಡಿದಂತಾಗಿದೆ. ದಿಕ್ಕು ತೋಚದೆ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಮತ್ತು ಸಹದ್ಯೋಗಿಗಳು ಹಾಗೂ ಸ್ನೇಹಿತರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

RELATED ARTICLES

Latest News