Sunday, October 27, 2024
Homeಜಿಲ್ಲಾ ಸುದ್ದಿಗಳು | District Newsನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು

ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು

ಮೈಸೂರು,ಅ.1- ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿದಂತೆ ಮೂವರೂ ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಸರಗೂರು ತಾಲೂಕಿನ ಚಂಗೋಡನಹಳ್ಳಿಯಲ್ಲಿ ನಡೆದಿದೆ.ಶಾವರಬಾನು (35), ಮಹಮ್ಮದ್ ಕಪಿಲ್ (42), ಶಾಹಿರಾಬಾನು(20) ಮೃತಪಟ್ಟ ದುರ್ದೈವಿಗಳು.

ಬೆಂಗಳೂರು ಮೂಲದವರಾದ ಇವರು ಸಂಬಂಕರೊಬ್ಬರ ತಿಥಿ ಕಾರ್ಯಕ್ಕೆ ಚಂಗೋಡನಹಳ್ಳಿಗೆ ಬಂದಿದ್ದರು. ಕಾರ್ಯದ ನಂತರ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಶಾಹಿರಾಬಾನು ಕೈಕಾಲು ತೊಳೆಯಲು ಇಳಿದಾಗ ನೀರಿನ ರಭಸಕ್ಕೆ ಕಾಲು ಜಾರಿ ನಾಲೆಗೆ ಬಿದ್ದಿದ್ದು, ಪುತ್ರಿಯನ್ನು ರಕ್ಷಿಸಲು ಮುಂದಾದ ತಂದೆ ಹಾಗೂ ತಾಯಿ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-10-2023)

ಸುದ್ದಿ ತಿಳಿಯುತ್ತಿದ್ದಂತೆ ಸರಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮೂವರ ಮೃತದೇಹಗಳನ್ನು ಹೊರತೆಗೆದು, ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.ಈ ಸಂಬಂಧ ಸರಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News