Tuesday, July 1, 2025
Homeರಾಷ್ಟ್ರೀಯ | Nationalತಿರುಪತಿಯಿಂದ ಹಿಂದಿರುಗುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ, ಮೂವರ ಸಾವು

ತಿರುಪತಿಯಿಂದ ಹಿಂದಿರುಗುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ, ಮೂವರ ಸಾವು

Three dead, 12 injured as speeding truck rams tempo traveler in Tirupati

ಬಾಗೇಪಲ್ಲಿ,ಜೂ.30- ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಭಕ್ತರು ಹಿಂದಿರುಗುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಭಕ್ತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಆಂಧ್ರಪ್ರದೇಶದ ಗಡಿ ಭಾಗದಲ್ಲಿ ನಡೆದಿದೆ.

ಮೃತಪಟ್ಟವರನ್ನು ಬಾಗೇಪಲ್ಲಿ ತಾಲ್ಲೂಕಿನ ಮೇಘರ್ಷ (17), ಚರಣ್‌(17) ಮತ್ತು ಶ್ರಾವಣಿ (28) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ ಗಾಯಗೊಂಡಿರುವ ಟಿಟಿ ವಾಹನದ ಚಾಲಕ ಮಂಜುನಾಥ್‌ ಸೇರಿದಂತೆ ಒಂಬತ್ತು ಮಂದಿಯನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಗಂಗಮ್ಮನ ಗುಡಿ ಯಿಂದ 12 ಮಂದಿ ನಿವಾಸಿಗಳು ಟಿಟಿ ವಾಹನದಲ್ಲಿ ತಿರುಪತಿಗೆ ಹೋಗಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಇಂದು ಮುಂಜಾನೆ ಟಿಟಿ ವಾಹನದಲ್ಲಿ ಹಿಂದಿರುಗುತ್ತಿದ್ದರು.

ಈ ವಾಹನ ಇಂದು ಬೆಳಗಿನ ಜಾವ ಆಂಧ್ರಪ್ರದೇಶದ ಮದನಪಲ್ಲಿ ತಾಲ್ಲೂಕಿನ ಕರುಬಲಕೋಟ ಮಂಡಲಂನ ಚಿನ್ನಾಮರ್ರಿ ಮಿಟ್ಟ ಬಳಿ ಎದುರಿಗೆ ಅತಿ ವೇಗವಾಗಿ ಬಂದ ಲಾರಿ ಟಿಟಿ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಲ್ಲದೇ ಟಿಟಿ ವಾಹನದಲ್ಲಿದ್ದ ಒಂಬತ್ತು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಮೂವರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

RELATED ARTICLES

Latest News