Thursday, May 2, 2024
Homeರಾಜ್ಯಮಂಗಳೂರಿನಲ್ಲಿ ಮೂವರು ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ದಾಳಿ

ಮಂಗಳೂರಿನಲ್ಲಿ ಮೂವರು ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ದಾಳಿ

ಮಂಗಳೂರು, ಮಾ.4- ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ಎರಚಿರುವ ಘಟನೆ ನಗರದ ಕಡಬ ಸರ್ಕಾರಿ ಕಾಲೇಜಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೂವರು ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರಿಗೆ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಮುಖಕ್ಕೆ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದಿದ್ದ ದುಷ್ಕರ್ಮಿ ಏಕಾಏಕಿ ಕಾಲೇಜು ಆವರಣದಲ್ಲಿ ನಿಂತಿದ್ದ ಯುವತಿಯರ ಮೇಲೆ ಆ್ಯಸಿಡ್ ಎರಚಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೇರಳ ಮೂಲದ ಈ ಆರೋಪಿಯನ್ನು ತಕ್ಷಣ ಹಿಡಿಯಲಾಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಈತ ಯಾರಿಗೆ ಆ್ಯಸಿಡ್ ಎರಚಲು ಬಂದಿದ್ದ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿನಿಯೊಬ್ಬಳನ್ನು ಟಾರ್ಗೆಟ್ ಮಾಡಿ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯಿಂದ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಪರೀಕ್ಷೆ ಆರಂಭಗೊಳ್ಳುವ ಕೆಲವೇ ನಿಮಿಷಗಳಲ್ಲಿ ಈ ಘಟನೆ ನಡೆದಿರುವುದು ಮಂಗಳೂರಿನಲ್ಲಿ ಆತಂಕ ಮೂಡಿಸಿದೆ.

RELATED ARTICLES

Latest News