Sunday, May 5, 2024
Homeಬೆಂಗಳೂರುಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರ ದುರ್ಮರಣ, ಆತ್ಮಹತ್ಯೆ ಶಂಕೆ

ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರ ದುರ್ಮರಣ, ಆತ್ಮಹತ್ಯೆ ಶಂಕೆ

ಬೆಂಗಳೂರು, ಏ.25- ರೈಲಿಗೆ ಸಿಲುಕಿ ಮೂವರು ಯುವಕರು ದಾರುಣವಾಗಿ ಮೃತ ಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರ ಹೆಸರು, ವಿಳಾಸ ಸಧ್ಯಕ್ಕೆ ತಿಳಿದು ಬಂದಿಲ್ಲ. ಇದು ಹಳಿ ದಾಟುವಾಗ ನಡೆದ ಆಕಸ್ಮಿಕ ಘಟನೆಯೋ ಅಥವಾ ಆತ್ಮಹತ್ಯೆಯೋ ಎಂಬುದು ನಿಗೂಢವಾಗಿದೆ.

ಸುಮಾರು 25 ವರ್ಷದವರಂತೆ ಕಾಣುವ ಈ ಮೂವರು ಯುವಕರು ಆಂಧ್ರ ಪ್ರದೇಶದ ಚಿತ್ತೂರು ಮೂಲದವರು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಮಾರತಹಳ್ಳಿ ಸಮೀಪದ ರೈಲ್ವೇ ಹಳಿಯಲ್ಲಿ ಮೂವರು ಯುವಕರ ಶವಗಳು ಕಂಡುಬಂದಿವೆ.

ಸುದ್ದಿ ತಿಳಿಯುತ್ತಿದ್ದಂತೆ ಬೈಯಪ್ಪನಹಳ್ಳಿ ರೈಲ್ವೇ ಠಾಣೆ ಪೊಲೀಸ್ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆೆ.

RELATED ARTICLES

Latest News