Friday, May 3, 2024
Homeರಾಷ್ಟ್ರೀಯಹಣ ವರ್ಗಾವಣೆ ತಡೆ ಕಾಯ್ದೆ ದುರ್ಬಳಕೆ ಬಗ್ಗೆ ಕೋರ್ಟ್‍ಗಳು ಎಚ್ಚೆತ್ತುಕೊಳ್ಳಬೇಕು ; ಸಿಬಲ್

ಹಣ ವರ್ಗಾವಣೆ ತಡೆ ಕಾಯ್ದೆ ದುರ್ಬಳಕೆ ಬಗ್ಗೆ ಕೋರ್ಟ್‍ಗಳು ಎಚ್ಚೆತ್ತುಕೊಳ್ಳಬೇಕು ; ಸಿಬಲ್

ನವದೆಹಲಿ, ನ.1 (ಪಿಟಿಐ) ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದ ಕೆಲ ದಿನಗಳ ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ದುರ್ಬಳಕೆ ಬಗ್ಗೆ ನ್ಯಾಯಾಲಯಗಳು ಎಚ್ಚೆತ್ತುಕೊಳ್ಳುವ ಸಮಯ ಬಂದಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ.

ತನಿಖಾ ಸಂಸ್ಥೆಯು ಬಹುತೇಕ ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡಿದೆ, ಇಡಿ ಮತ್ತು ನಾಯಕರಿಗೆ ಜಾಮೀನು ನಿರಾಕರಣೆ ಸರ್ಕಾರದ ಕೈಯಲ್ಲಿ ರಾಜಕೀಯ ಅಸ್ತ್ರ ವಾಗಿ ಮಾರ್ಪಟ್ಟಿದೆ ಎಂದು ಅವರು ಆರೋಪಿಸಿದರು.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲಾಗಿದೆ ಮತ್ತು ಮೂಲಗಳ ಪ್ರಕಾರ, ನವೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯ ತನಿಖಾ ಸಂಸ್ಥೆಯ ಕಚೇರಿಯಲ್ಲಿ ಇಡಿ ಅವರು ಅಬಕಾರಿ ನೀತಿ ಸಂಬಂಧಿತ ಪ್ರಕರಣದಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಾರೆ.

ಭಾರತ ಮೂಲದ ನಂದಿನಿ ದಾಸ್‍ಗೆ ಬ್ರಿಟಿಷ್ ಅಕಾಡಮಿ ಪುಸ್ತಕ ಪ್ರಶಸ್ತಿ

ಸಿಬಲ್ ಅವರು ಎಕ್ಸ್ ಪೋಸ್ಟ್‍ನಲ್ಲಿ, ಕೇಜ್ರಿವಾಲ್ ಅವರನ್ನು ಇಡಿ ಕರೆದಿದೆ. ಇಡಿ ವಿರೋಧದಲ್ಲಿರುವ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿಕೊಂಡಿದ್ದಾರೆ. ಇಡಿ ಮತ್ತು ನಾಯಕರಿಗೆ ಜಾಮೀನು ನಿರಾಕರಣೆ ಸರ್ಕಾರದ ಕೈಯಲ್ಲಿ ರಾಜಕೀಯ ಅಸ್ತ್ರವಾಗಿ ಮಾರ್ಪಟ್ಟಿದೆ. ಪಿಎಂಎಲ್‍ಎಯ ದುರುಪಯೋಗದ ಬಗ್ಗೆ ನ್ಯಾಯಾಲಯಗಳು ಎಚ್ಚೆತ್ತುಕೊಳ್ಳುವ ಸಮಯ ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ ನಂತರ ಮತ್ತೊಂದು ಪೋಸ್ಟ್ ನಲ್ಲಿ ಸಿಬಲ್, ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ಇಂಡಿಯಾ ಬಣ ಒಂದೇ ಧ್ವನಿಯಲ್ಲಿ ಮಾತನಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

RELATED ARTICLES

Latest News