ನಿತ್ಯ ನೀತಿ : ಭಾವನೆಗಳು ಪ್ರಯಾಣಿಕರಿದ್ದಂತೆ. ಅವುಗಳನ್ನು ಸುಮ್ಮನೆ ಬಂದು ಹೋಗಲು ಬಿಡಿ. ಹಿಡಿದಿಟ್ಟುಕೊಳ್ಳಬೇಡಿ.
ಪಂಚಾಂಗ ಶುಕ್ರವಾರ 06-01-2023
ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ /ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಆರಿದ್ರಾ / ಯೋಗ: ಬ್ರಹ್ಮ / ಕರಣ: ವಿಷ್ಟಿ
ಸೂರ್ಯೋದಯ : ಬೆ.06.43
ಸೂರ್ಯಾಸ್ತ : 06.07
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00
ರಾಶಿ ಭವಿಷ್ಯ
ಮೇಷ: ಎಲ್ಲಾ ಕಾರ್ಯಗಳಲ್ಲೂ ಯಶಸ್ಸು ಸಿಗಲಿದೆ. ನಿಮ್ಮ ನಡವಳಿಕೆ ತುಂಬಾ ಸೌಮ್ಯವಾಗಿರುತ್ತದೆ.
ವೃಷಭ: ಉತ್ತಮ ಅವಕಾಶಗಳು ಸಿಗುವುದರಿಂದ ಆತ್ಮಗೌರವ ಹೆಚ್ಚಾಗಲಿದೆ.
ಮಿಥುನ: ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ. ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ.
ಕಟಕ: ಶುಭ ಸಮಾರಂಭಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಸಿಂಹ: ಮಿತ್ರರೊಂದಿಗೆ ಸಹನೆಯಿಂದ ವ್ಯವಹರಿಸಿ. ನಿರೀಕ್ಷಿತ ಪ್ರಯಾಣದಿಂದ ಉತ್ತಮ ಧನಾರ್ಜನೆ.
ಕನ್ಯಾ: ದಾಯಾದಿ ಕಲಹ ವಾಗಬಹುದು. ಪ್ರಯಾಣ ಮಾಡದಿರುವುದು ಸೂಕ್ತ.
ತುಲಾ: ಅನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ವೃಶ್ಚಿಕ: ಲೇವಾದೇವಿ ವ್ಯವಹಾರ ನಡೆಸುವುದು ಸರಿಯಲ್ಲ. ಸೋಮಾರಿತನ ಶತ್ರುವಾಗಿ ಪರಿಣಮಿಸಲಿದೆ.
ಧನುಸ್ಸು: ಚುರುಕುತನದಿಂದ ಸಮಾಜದಲ್ಲಿ ಸ್ಥಾನಮಾನ ವೃದ್ಧಿಸಿ ಕೀರ್ತಿ ಪ್ರಾಪ್ತಿಯಾಗಲಿದೆ.
ಮಕರ: ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭ: ಪೋಷಕರ ಸೇವೆಯನ್ನು ಆಸಕ್ತಿ ವಹಿಸಿ ಮಾಡುವುದರಿಂದ ತೊಂದರೆಗಳಿಂದ ಮುಕ್ತರಾಗುವಿರಿ.
ಮೀನ: ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಡುವ ಮುನ್ನ ಹಿರಿಯರೊಂದಿಗೆ ಚರ್ಚಿಸಿ.
DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,