ನಿತ್ಯ ನೀತಿ : ಒಳ್ಳೆಯ ಮನಸ್ಸು, ಕ್ಷಮಿಸುವ ಗುಣ, ಕೈ ಜೋಡಿಸುವ ಸ್ನೇಹ, ಸಮಾಧಾನ ಮಾಡುವ ಒಂದು ಹೃದಯ, ಇವು ನಮ್ಮ ಜೀವನದ ನಿಜವಾದ ಆಸ್ತಿಗಳು.
ಪಂಚಾಂಗ ಬುಧವಾರ 15-03-2023
ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಸಿದ್ಧಿ / ಕರಣ: ಬಾಲವ
ಸೂರ್ಯೋದಯ : ಬೆ.06.27
ಸೂರ್ಯಾಸ್ತ : 06.30
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00
ರಾಶಿ ಭವಿಷ್ಯ
ಮೇಷ: ಆಪ್ತರೊಂದಿಗೆ ವಿಚಾರ ವಿನಿಮಯ ನಡೆಸುವಿರಿ. ಆರ್ಥಿಕ ಸಂಕಷ್ಟ ಪರಿಹರಿಸಿಕೊಳ್ಳುವಿರಿ.
ವೃಷಭ: ಉದ್ಯೋಗ ಬದಲಾವಣೆಗೆ ಅಡೆತಡೆ ಉಂಟಾಗಲಿದೆ. ಅತೀ ಒತ್ತಡಕ್ಕೆ ಒಳಗಾಗದಿರಿ.
ಮಿಥುನ: ಹಂತ ಹಂತವಾಗಿ ಕೆಲವು ವಿವಾದಗಳು ನಿವಾರಣೆಯಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕಟಕ: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ಸಿಂಹ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.
ಕನ್ಯಾ: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ತುಲಾ: ಕೆಲಸಗಳು ನಿಧಾನ ಗತಿಯಲ್ಲಿ ಸಾಗಲಿವೆ.
ವೃಶ್ಚಿಕ: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು, ಬಂಧುಗಳು ನೀಡುವ ಸಲಹೆ-ಸೂಚನೆಗಳಿಂದ ದೂರವಾಗಲಿವೆ.
ಧನುಸ್ಸು: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಮಕರ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸಿ.
ಕುಂಭ: ಮನದಲ್ಲಿರುವ ದುಗುಡ ನಿವಾರಿಸಿಕೊಳ್ಳಲು ಯತ್ನಿಸುವಿರಿ. ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಮೀನ: ಧಾರ್ಮಿಕ ಕಾರ್ಯಗಳತ್ತ ಗಮನ ಹರಿಸುವಿರಿ. ಕೀರ್ತಿ ನಿಮ್ಮನ್ನು ಅರಸಿ ಬರಲಿದೆ.
DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,