ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(16-12-2022)

Social Share

ನಿತ್ಯ ನೀತಿ : ದಿನಕ್ಕೆ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲದಿದ್ದರೆ ನೀವು ಈ ಜಗತ್ತಿನಲ್ಲಿ ಒಬ್ಬ ಅತ್ಯುತ್ತಮ ವ್ಯಕ್ತಿಯ ಜತೆ ಭೇಟಿಯಾಗುವುದನ್ನು ತಪ್ಪಿಸಿದಂತಾಗುತ್ತದೆ.

ಪಂಚಾಂಗ ಶುಕ್ರವಾರ 16-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪೂರ್ವಾಭಾದ್ರ / ಮಳೆ ನಕ್ಷತ್ರ: ಮೂಲಾ

ಸೂರ್ಯೋದಯ : ಬೆ.06.34
ಸೂರ್ಯಾಸ್ತ : 05.56
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ಪೊಲೀಸ್ ಅಧಿಕಾರಿಗಳ ಜವಾಬ್ದಾರಿ ಕಡಿಮೆಯಾಗಲಿದೆ. ಕುಲದೇವರನ್ನು ಪ್ರಾರ್ಥಿಸಿ.
ವೃಷಭ: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ಮಿಥುನ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.

ಕಟಕ: ನಿಮ್ಮ ವರ್ಚಸ್ಸಿನ ಪ್ರಭಾವದಿಂದ ವಿನೂತನ ವಾದ ಅವಕಾಶಗಳು ದೊರೆಯಲಿವೆ.
ಸಿಂಹ: ಮಾನಸಿಕ ಧೈರ್ಯ, ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಧ್ಯಾನ ಮಾಡುವುದು ಒಳಿತು.
ಕನ್ಯಾ: ಅನವಶ್ಯಕ ಗೊಂದಲಗಳನ್ನು ಮೈಮೇಲೆ ಎಳದುಕೊಳ್ಳದಿರಿ. ಸ್ನೇಹಿತರನ್ನು ನಂಬಿ.

ತುಲಾ: ಹಿಂಜರಿಕೆ ಮತ್ತು ಭಯದ ಸ್ವಭಾವ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ವೃಶ್ಚಿಕ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.
ಧನುಸ್ಸು: ಹತ್ತಿರದ ಸ್ನೇಹಿತ ರಿಂದಲೇ ನಿಮ್ಮ ಬಗ್ಗೆ ಕೆಟ್ಟ ಮಾತುಗಳು ಕೇಳಿಬರಲಿವೆ.

ಮಕರ: ಕಚೇರಿಯಲ್ಲಿ ಮಹಿಳಾ ಉದ್ಯಮಿಗಳಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಜಾಗ್ರತೆ.
ಕುಂಭ: ಕುಟುಂಬ ಕಲಹ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆಯಿಂದ ಮಾತನಾಡಿ.
ಮೀನ: ಅನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article