ನಿತ್ಯ ನೀತಿ: ಜೀವನದಲ್ಲಿ ಆರಿಸಿಕೊಳ್ಳಲು ಅನೇಕ ಅವಕಾಶಗಳಿವೆ. ಸಂತೋಷವನ್ನೇ ನೇರವಾಗಿ ಪಡೆಯಲಾಗದು. ಶ್ರಮ-ಶ್ರದ್ಧೆಗಳನ್ನು ಆರಿಸಿಕೊಂಡಾಗ ಸಂತೋಷ ಉಚಿತವಾಗಿ ದೊರಕುತ್ತದೆ.
ಪಂಚಾಂಗ ಶನಿವಾರ 17-09-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ /ವರ್ಷ ಋತು /ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ /ನಕ್ಷತ್ರ: ರೋಹಿಣಿ /ಮಳೆ ನಕ್ಷತ್ರ:ಉತ್ತರಫಲ್ಗುಣಿ
ಸೂರ್ಯೋದಯ: ಬೆ.06.09
ಸೂರ್ಯಾಸ್ತ: 06.20
ರಾಹುಕಾಲ: 9.00-10.30
ಯಮಗಂಡ ಕಾಲ: 1.30-3.00
ಗುಳಿಕ ಕಾಲ: 6.00-7.30
ರಾಶಿ ಭವಿಷ್ಯ
ಮೇಷ: ಅನ್ಯರ ಸಹಾಯವಿಲ್ಲದೆ ಸ್ವಸಾಮಥ್ರ್ಯದಿಂದ ಕೆಲಸ ಗಿಟ್ಟಿಸಿಕೊಳ್ಳುವಿರಿ. ಸಹಕಾರ ಮನೋಭಾವದಿಂದ ನೆಮ್ಮದಿ ಸಿಗಲಿದೆ.
ವೃಷಭ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳ ಬಹುದು. ಆದ್ದರಿಂದ ಜಾಗ್ರತೆಯಿಂದಿರಿ.
ಮಿಥುನ: ಇಲ್ಲಸಲ್ಲದ ವಿಚಾರಗಳಿಗೆ ಕಿವಿಗೊಟ್ಟು ಮನಸ್ಸಿನ ನೆಮ್ಮದಿ ಹಾಳುಕೊಳ್ಳಬೇಡಿ.
ಕಟಕ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟ.
ಸಿಂಹ: ವೃತ್ತಿ ಕ್ಷೇತ್ರದಲ್ಲಿ ತಮ್ಮತನ ಉಳಿಸಿಕೊಳ್ಳುವುದು ಬಹಳ ಒಳ್ಳೆಯದು.
ಕನ್ಯಾ: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ತುಲಾ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ. ಇಡೀ ದಿನ ಶುಭವಾಗಿರಲಿದೆ.
ವೃಶ್ಚಿಕ: ಲಾಭ-ನಷ್ಟಗಳ ಲೆಕ್ಕಾಚಾರದಲ್ಲೇ ಮುಳುಗು ವುದಕ್ಕಿಂತ ಮನೆ ಸದಸ್ಯರೊಂದಿಗೆ ಕಾಲ ಕಳೆಯಿರಿ.
ಧನುಸ್ಸು: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸಿ.
ಮಕರ: ಸದಾ ನಿಮ್ಮ ಬೆಂಬಲಕ್ಕೆ ನಿಲ್ಲುವ ಗೆಳೆಯರೊಬ್ಬರು ಸಿಗುವರು.
ಕುಂಭ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ಮೀನ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.