ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-09-2022)

Social Share

ನಿತ್ಯ ನೀತಿ: ಇಂದು ಮಾಡಬೇಕಾದ ಕೆಲಸವನ್ನು ನಾಳೆ, ನಾಳೆ ಎಂದು ಮುಂದೂಡಬಾರದು. ಮುಂದೆ ಮಾಡಲು ಬೇಕಾದ ದೇಹಶಕ್ತಿ, ಮನಃಶಕ್ತಿ ಇರುವುದಿಲ್ಲ.

ಪಂಚಾಂಗ ಬುಧವಾರ 21-09-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ /ವರ್ಷ ಋತು /ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ /ನಕ್ಷತ್ರ: ಪುಷ್ಯ /ಮಳೆ ನಕ್ಷತ್ರ:ಉತ್ತರಫಲ್ಗುಣಿ

ಸೂರ್ಯೋದಯ: ಬೆ.06.09
ಸೂರ್ಯಾಸ್ತ: 06.17
ರಾಹುಕಾಲ: 12.00-1.30
ಯಮಗಂಡ ಕಾಲ: 7.30-9.00
ಗುಳಿಕ ಕಾಲ: 10.30-12.00

ರಾಶಿ ಭವಿಷ್ಯ
ಮೇಷ: ರಾಜಕೀಯ ವ್ಯಕ್ತಿಗಳು ವಿವಾದಾತ್ಮಕ ಹೇಳಿಕೆಯಿಂದಾಗಿ ಸಂಕಷ್ಟಕ್ಕೆ ಸಿಲುಕಬಹುದು.
ವೃಷಭ: ಕೃಷಿಕರಿಗೆ ಆಗಾಗ ಎದುರಾಗುವ ಅಡೆತಡೆಗಳು ನಿವಾರಣೆಯಾಗಲಿವೆ.
ಮಿಥುನ: ಮಗನ ಆರೋಗ್ಯದಲ್ಲಿ ಉಂಟಾಗುವ ವ್ಯತ್ಯಾಸದಿಂದಾಗಿ ಜವಾಬ್ದಾರಿ ಹೆಚ್ಚಾಗಲಿದೆ.

ಕಟಕ: ಮಡದಿಯೊಂದಿಗೆ ಸಂಸಾರಕ್ಕೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುವಿರಿ.
ಸಿಂಹ: ಸ್ನೇಹಿತರ ಸಲಹೆ ಅಥವಾ ಸ್ವಾರ್ಥದ ಮನೋಭಾವದಿಂದ ಬರುವ ದುರಾಲೋಚನೆಯು ನಿಮ್ಮ ದಾರಿ ತಪ್ಪಿಸಬಹುದು.
ಕನ್ಯಾ: ಉತ್ತಮ ಅವಕಾಶ ಗಳು ಸಿಗುವುದರಿಂದ ಆತ್ಮಗೌರವ ಹೆಚ್ಚಾಗಲಿದೆ.

ತುಲಾ: ಕಟ್ಟಡ ನಿರ್ಮಾಣ ಗಾರರಿಗೆ ಹೆಚ್ಚಿನ ಕೆಲಸ ಇರುವುದು. ಕಲಾವಿದರಿಗೆ ಒಳ್ಳೆಯ ಅವಕಾಶಗಳು ದೊರೆಯುತ್ತವೆ.
ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಸಣ್ಣಪುಟ್ಟ ಸಮಸ್ಯೆ ಯಿಂದಾಗಿ ಹಿತಶತ್ರುಗಳ ಬಗ್ಗೆ ಮಾಹಿತಿ ಸಿಗಲಿದೆ.
ಧನುಸ್ಸು: ಪೊಲೀಸ್ ಅಧಿಕಾರಿಗಳ ಜವಾಬ್ದಾರಿ ಕಡಿಮೆ ಯಾಗಲಿದೆ. ಅನೇಕ ಅಡೆತಡೆಗಳು ದೂರವಾಗಲಿವೆ.

ಮಕರ: ಕಾನೂನಿಗೆ ಸಂಬಂಧಿಸಿದ ಕೆಲಸದಲ್ಲಿ ಜಯ ಸಿಗಲಿದೆ. ಕಲಾವಿದರಿಗೆ ಒಳ್ಳೆಯ ದಿನ.
ಕುಂಭ: ಸರ್ಕಾರಿ ನೌಕರರಿಗೆ ಉನ್ನತ ಸ್ಥಾನಮಾನ ಸಿಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮೀನ: ಹಿರಿಯ ಅಧಿಕಾರಿಗಳ ಆಕಸ್ಮಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.

Articles You Might Like

Share This Article