Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ನಿತ್ಯ ನೀತಿ : ನಿಮ ಜೀವನದಲ್ಲಿ ಏನೇ ಏರುಪೇರಾದರೂ ಆಲೋಚನೆಯೇ ನಿಮ ಮೂಲ ಬಂಡವಾಳ ಮತ್ತು ಆಸ್ತಿಯಾಗಿರಬೇಕು.

ಪಂಚಾಂಗ : ಮಂಗಳವಾರ, 04-06-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ /ತಿಥಿ: ತ್ರಯೋದಶಿ / ನಕ್ಷತ್ರ: ಭರಣಿ / ಯೋಗ: ಶೋಭನ / ಕರಣ: ಗರಜೆ

ಸೂರ್ಯೋದಯ – ಬೆ.05.52
ಸೂರ್ಯಾಸ್ತ – 06.44
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ
: ಸಾಲದ ಚಿಂತೆ ಕಾಡಲಿದೆ. ಪಾಲುದಾರಿಕೆಯಲ್ಲಿ ಸಮಸ್ಯೆ ಉಂಟಾಗಲಿದೆ.
ವೃಷಭ: ಪಿತ್ರಾರ್ಜಿತ ಆಸ್ತಿ ವಿಷಯಗಳಿಂದ ತೊಂದರೆ ಎದುರಿಸಬೇಕಾಗುತ್ತದೆ.
ಮಿಥುನ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.

ಕಟಕ: ತಂದೆಯವರ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸುತ್ತದೆ. ಶಾಂತವಾಗಿರುವುದು ಒಳಿತು.
ಸಿಂಹ: ನಿಮ್ಮ ಜನಪ್ರಿಯತೆ ಉತ್ತುಂಗದಲ್ಲಿರುತ್ತದೆ ಮತ್ತು ಇತರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವಿರಿ.
ಕನ್ಯಾ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ ಯಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ: ಹೊಸ ವ್ಯವಹಾರ ಪ್ರಾರಂಭಿಸಿಲು ಉತ್ತಮ ದಿನ.
ವೃಶ್ಚಿಕ: ವ್ಯವಹಾರದಲ್ಲಿ ಹಿತ ಶತ್ರುಗಳಿಂದ ತೊಂದರೆ. ಅವಿವಾಹಿತರಿಗೆ ವಿವಾಹ ನಿಶ್ಚಯ.
ಧನುಸ್ಸು: ಕೌಟುಂಬಿಕ ಮತ್ತು ವೈವಾಹಿಕ ಜೀವನ ಬಹಳ ಆಹ್ಲಾದಕರವಾಗಿರುತ್ತದೆ.

ಮಕರ: ಕೆಟ್ಟ ಆಲೋಚನೆ ಮಾಡುವುದನ್ನು ತಪ್ಪಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಧಿಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.
ಮೀನ: ಸ್ನೇಹಿತರ ನೇರ ಮಾತುಗಳಿಂದ ಅವಮಾನ ಎದುರಿಸಬೇಕಾಗುತ್ತದೆ. ಹಣಕಾಸಿನ ತೊಂದರೆ.

RELATED ARTICLES

Latest News