Tuesday, April 30, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ನಿತ್ಯ ನೀತಿ : ನಾಲಗೆಯ ರುಚಿ ಬಿಟ್ಟರೆ ಶರೀರಕ್ಕೆ ಲಾಭ. ವಾದ-ವಿವಾದಗಳನ್ನು ಬಿಟ್ಟರೆ ಸಂಬಂಧಗಳಿಗೆ ಲಾಭ. ವ್ಯರ್ಥ ಚಿಂತೆಗಳನ್ನು ಬಿಟ್ಟರೆ ಇಡೀ ಜೀವನಕ್ಕೇ ಲಾಭ.

ಪಂಚಾಂಗ : ಮಂಗಳವಾರ, 09-04-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತÀ ಋತು / ಚೈತ್ರ ಮಾಸ / ಶುಕ್ಲ ಪಕ್ಷ
ತಿಥಿ: ಪ್ರತಿಪದ್ / ನಕ್ಷತ್ರ: ರೇವತಿ / ಯೋಗ: ವೈಧೃತಿ / ಕರಣ: ಕಿಂಸ್ತುಘ್ನ ಸೂರ್ಯೋದಯ : ಬೆ.06.11
ಸೂರ್ಯಾಸ್ತ : 06.32
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.
ವೃಷಭ: ವಿಪರೀತ ಕೆಲಸದಿಂದಾಗಿ ದೇಹಾಲಸ್ಯ ಉಂಟಾಗುವುದರಿಂದ ವಿಶ್ರಾಂತಿ ಬಯಸುವಿರಿ.
ಮಿಥುನ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.

ಕಟಕ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಒಳ್ಳೆಯದು.
ಸಿಂಹ: ಹೊಸ ಹುದ್ದೆಯಲ್ಲಿ ಗೌರವ, ಸಂತೋಷ, ಹೊಸ ರೀತಿಯ ಅನುಭವ ಸಿಗಲಿದೆ.
ಕನ್ಯಾ: ಕುಟುಂಬದ ಅಗತ್ಯ ಗಳನ್ನು ಪೂರೈಸುವುದರಲ್ಲೇ ಹೆಚ್ಚು ಸಮಯ ಕಳೆಯುವಿರಿ.

ತುಲಾ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯಿರಿ.
ವೃಶ್ಚಿಕ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಒಳಿತು.
ಧನುಸ್ಸು: ಜವಾಬ್ದಾರಿಗಳನ್ನು ಪೂರೈಸಿ. ಖಂಡಿತವಾಗಿಯೂ ಉನ್ನತ ಮಟ್ಟಕ್ಕೆ ಏರುವಿರಿ.

ಮಕರ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.
ಕುಂಭ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆ ಒಳಗಾಗಬಹುದು.
ಮೀನ: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ. ಕುಟುಂಬದ ಕಡೆ ಗಮನ ಹರಿಸಿ.

RELATED ARTICLES

Latest News