ನಿತ್ಯ ನೀತಿ : ನಮ ಹೃದಯದಲ್ಲಿ ಪ್ರೀತಿ ಎಂಬ ಫಸಲನ್ನು ಬೆಳೆದು ಜಗಕ್ಕೆ ಹಂಚಲು ಕಲಿಯಬೇಕು.
ಪಂಚಾಂಗ : ಬುಧವಾರ, 10-09-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಶರದ್ / ಮಾಸ: ಭಾದ್ರಪದ / ಪಕ್ಷ:ಕೃಷ್ಣ / ತಿಥಿ: ತೃತೀಯಾ / ನಕ್ಷತ್ರ: ರೇವತಿ / ಯೋಗ: ವೃದ್ಧಿ / ಕರಣ: ಬವ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.24
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಮಾಡಬೇಕೆಂದುಕೊಂಡಿರುವ ಒಳ್ಳೆಯ ಕೆಲಸ ವನ್ನು ಇಂದಿನಿಂದಲೇ ಆರಂಭಿಸುವುದು ಸೂಕ್ತ.
ವೃಷಭ: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ಮಿಥುನ: ಹೊಸ ಪ್ರದೇಶಕ್ಕೆ ಭೇಟಿ ನೀಡಿ ಒಳ್ಳೆಯ ಅನುಭವ ಪಡೆದುಕೊಳ್ಳಲು ಅವಕಾಶ ಸಿಗಲಿದೆ.
ಕಟಕ: ನೌಕರರಿಗೆ ಸ್ಥಾನ ಬದಲಾವಣೆ ಅಥವಾ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ಸಿಂಹ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ಕನ್ಯಾ: ಆಪ್ತರಿಂದಲೇ ಕೆಟ್ಟ ಮಾತು ಕೇಳಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ.
ತುಲಾ: ಆಸ್ತಿ ಸಂಬಂ ತ ತಗಾದೆಗಳಿಗೆ ನ್ಯಾಯವಾದಿಗಳ ಸಲಹೆ ಪಡೆಯಿರಿ.
ವೃಶ್ಚಿಕ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗುವುದು ಸರಿಯಲ್ಲ.
ಧನುಸ್ಸು: ಲೇವಾದೇವಿ ವ್ಯವಹಾರದಲ್ಲಿ ಧನಲಾಭವಿದೆ. ಸಮಾಧಾನದಿಂದ ವ್ಯವಹರಿಸಿ.
ಮಕರ: ಷೇರು ವ್ಯವಹಾರ ದಲ್ಲಿ ತೊಡಗಿಕೊಂಡವರಿಗೆ ಸ್ವಲ್ಪ ಮಟ್ಟಿನ ಲಾಭ ಸಿಗಲಿದೆ.
ಕುಂಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಮೀನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.