ನಿತ್ಯ ನೀತಿ : ನಿಮ್ಮ ಅಮೂಲ್ಯ ಸಮಯವನ್ನು ಯಾರಿಗೆ ನೀಡುತ್ತೀರಿ ಎಂಬುದರ ಬಗ್ಗೆ ಜಾಗರೂಕರಾಗಿರಿ. ಸಮಯ ಹಣಕ್ಕಿಂತ ದುಬಾರಿ.
ಪಂಚಾಂಗ : ಮಂಗಳವಾರ, 13-09-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ರೇವತಿ / ಮಳೆ ನಕ್ಷತ್ರ: ಪುಬ್ಬಾ
ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.23
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30
# ಇಂಡಿಯಾ ರಾಶಿ ಭವಿಷ್ಯ :
ಮೇಷ: ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ನಿಮ್ಮಿಂದ ಕೆಟ್ಟ ಕೆಲಸ ಮಾಡಿಸುವ ಪ್ರಯತ್ನಕ್ಕೆ ನಿಮ್ಮ ಸ್ನೇಹಿತರೇ ಯತ್ನ ನಡೆಸುವರು.
ಮಿಥುನ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯುವುದು ಸೂಕ್ತ.
ಕಟಕ: ಸಾಲಗಾರರ ಕಿರಿಕಿರಿ ಉಂಟಾಗಲಿದೆ. ಮಕ್ಕಳ ವಿಷಯದಲ್ಲಿ ಚಿಂತೆ ಕಾಡಲಿದೆ. ಸಣ್ಣ ಸಣ್ಣ ವಿಚಾರಕ್ಕೂ ನೆರೆಹೊರೆ ಯವರ ಕಿರಿಕಿರಿ ತಪ್ಪದು.
ಸಿಂಹ: ಜವಾಬ್ದಾರಿ ಯುತವಾದ ಕಾರ್ಯಗಳ ಬಗ್ಗೆ ಗಮನ ಹರಿಸಿ.
ಕನ್ಯಾ: ಮನೆಯ ವಿಷಯದಲ್ಲಿ ಯಾವುದೇ ಚಿಂತೆ ಬೇಡ. ವ್ಯಾಪಾರ- ವ್ಯವಹಾರಗಳು ಸರಾಗವಾಗಿ ನಡೆಯಲಿವೆ.
ತುಲಾ: ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ. ಕಂದಾಯ ಅಕಾರಿಗಳಿಗೆ ಕೆಲಸದ ಹೊಣೆ ಹೆಚ್ಚಾಗುವುದು. ಉತ್ತಮ ದಿನ.
ವೃಶ್ಚಿಕ: ಆರ್ಥಿಕ ತಾಪತ್ರಯಗಳ ಬಗ್ಗೆ ಬೇರೆಯವರೊಂದಿಗೆ ಹೇಳಿಕೊಳ್ಳಲಾಗದು.
ಧನುಸ್ಸು: ಲೆಕ್ಕ ಪರಿಶೋಧಕರಿಗೆ ಮತ್ತು ನ್ಯಾಯವಾದಿಗಳಿಗೆ ತೃಪ್ತಿಕರವಾದ ದಿನ.
ಮಕರ: ಹಲವಾರು ಆಸಕ್ತಿದಾಯಕ ವಿಚಾರಗಳು ನಿಮ್ಮ ಕಿವಿಗೆ ಬೀಳಲಿವೆ. ದೂರ ಪ್ರಯಾಣ ಬೇಡ.
ಕುಂಭ: ಕೆಲಸದಲ್ಲಿ ಹೆಚ್ಚಿನ ಸ್ವಾತಂತ್ರ್ಯ ಸಿಗಲಿದೆ.
ಮೀನ: ಒಂದು ವಿಚಾರದ ಬಗ್ಗೆ ತಿಳಿದುಕೊಳ್ಳದೆ ಯಾವುದೇ ರೀತಿಯ ತೀರ್ಮಾನ ಕೈಗೊಳ್ಳದಿರಿ.