ನಿತ್ಯ ನೀತಿ : ಗಿಣಿಶಾಸ್ತ್ರ ಕೇಳಿ ಮರ ಏರಿದರೆ ಕೈಜಾರಿ ಕೆಳಗೆ ಬಿದ್ದರೂ ಬೀಳಬಹುದು. ಆದರೆ… ಆತವಿಶ್ವಾಸದಿಂದ ಮರ ಏರಿದರೆ ತುತ್ತತುದಿಯ ಹಣ್ಣು ನಿನ್ನ ಪಾಲಾಗಬಹುದು.
ಪಂಚಾಂಗ : ಮಂಗಳವಾರ, 16-09-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಭಾದ್ರಪದ / ಪಕ್ಷ:ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಅರ್ದ್ರಾ / ಯೋಗ: ವರೀಯಾ / ಕರಣ: ವಣಿಜ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.20
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಮಾಡಬೇಕೆಂದುಕೊಂಡಿರುವ ಒಳ್ಳೆಯ ಕೆಲಸ ವನ್ನು ಇಂದಿನಿಂದಲೇ ಆರಂಭಿಸಿ.
ವೃಷಭ: ಹೊಸ ಪ್ರದೇಶಕ್ಕೆ ಭೇಟಿ ನೀಡಿ ಒಳ್ಳೆಯ ಅನುಭವ ಪಡೆದುಕೊಳ್ಳಲು ಅವಕಾಶ ಸಿಗಲಿದೆ.
ಮಿಥುನ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾ ಸುವಿರಿ.
ಕಟಕ: ಸ್ನೇಹಿತರಿಂದಲೇ ಕೆಟ್ಟ ಮಾತು ಕೇಳಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ.
ಸಿಂಹ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ಕನ್ಯಾ: ಷೇರು ವ್ಯವಹಾರ ದಲ್ಲಿ ತೊಡಗಿಕೊಂಡವರಿಗೆ ಸ್ವಲ್ಪ ಮಟ್ಟಿನ ಲಾಭ ಸಿಗಲಿದೆ.
ತುಲಾ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ವೃಶ್ಚಿಕ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗುವುದು ಸರಿಯಲ್ಲ.
ಧನುಸ್ಸು: ಲೇವಾದೇವಿ ವ್ಯವಹಾರದಲ್ಲಿ ಧನಲಾಭವಿದೆ. ಸಮಾಧಾನದಿಂದ ವ್ಯವಹರಿಸಿ.
ಮಕರ: ನೌಕರರಿಗೆ ಸ್ಥಾನ ಬದಲಾವಣೆ ಅಥವಾ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ಕುಂಭ: ಆಸ್ತಿ ಸಂಬಂ ತ ತಗಾದೆಗಳಿಗೆ ನ್ಯಾಯವಾದಿಗಳ ಸಲಹೆ ಪಡೆಯಿರಿ.
ಮೀನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.