Wednesday, May 15, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-04-2024)

ನಿತ್ಯ ನೀತಿ :
ಯಾರು ನಿನಗಾಗಿ ಯಾರನ್ನಾದರೂ ಬಿಡುತ್ತೇನೆ ಎನ್ನುತ್ತಾರೋ ಅವರನ್ನು ನಂಬಬೇಡ. ಅಂದು ಅವರನ್ನು ಬಿಟ್ಟ ಮನಸ್ಸು ನಾಳೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಗೆ ಹೇಳುವುದು..?

ಪಂಚಾಂಗ :29-04-2024, ಸೋಮವಾರ
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಪೂರ್ವಾಷಾಢ / ಯೋಗ: ಸಿದ್ಧಿ / ಕರಣ: ಗರಜೆ
ಸೂರ್ಯೋದಯ : ಬೆ.06.00
ಸೂರ್ಯಾಸ್ತ : 06.34
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿಭವಿಷ್ಯ :
ಮೇಷ
: ರಾಜಕೀಯ ವ್ಯಕ್ತಿಗಳು ವಿವಾದಾತ್ಮಕ ಹೇಳಿಕೆಯಿಂದಾಗಿ ಸಂಕಷ್ಟಕ್ಕೆ ಸಿಲುಕಬಹುದು.
ವೃಷಭ: ಕೃಷಿಕರಿಗೆ ಆಗಾಗ ಎದುರಾಗುವ ಅಡೆತಡೆಗಳು ನಿವಾರಣೆಯಾಗಲಿವೆ.
ಮಿಥುನ: ಮಹತ್ವದ ಕೆಲಸ ಗಳಿಗೆ ಕೈ ಹಾಕುವ ಮುನ್ನ ಮನೆಯವರೊಂದಿಗೆ ದೀರ್ಘ ಕಾಲದ ಸಮಾಲೋಚನೆ ನಡೆಸುವುದು ಒಳಿತು.

ಕಟಕ: ಮಗನ ಆರೋಗ್ಯದಲ್ಲಿ ಉಂಟಾಗುವ ವ್ಯತ್ಯಾಸದಿಂದಾಗಿ ಜವಾಬ್ದಾರಿ ಹೆಚ್ಚಾಗಲಿದೆ.
ಸಿಂಹ: ಉತ್ತಮ ಅವಕಾಶ ಗಳು ಸಿಗುವುದರಿಂದ ಆತ್ಮಗೌರವ ಹೆಚ್ಚಾಗಲಿದೆ.
ಕನ್ಯಾ: ಸ್ನೇಹಿತರ ಸಲಹೆ ಅಥವಾ ಸ್ವಾರ್ಥದ ಮನೋಭಾವದಿಂದ ಬರುವ ದುರಾಲೋಚನೆಯು ನಿಮ್ಮ ದಾರಿ ತಪ್ಪಿಸಬಹುದು.

ತುಲಾ: ಆರೋಗ್ಯದಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ವೃಶ್ಚಿಕ: ಹಿರಿಯ ಅಧಿ ಕಾರಿಗಳ ಆಕಸ್ಮಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.
ಧನುಸ್ಸು: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.

ಮಕರ: ಕಾನೂನಿಗೆ ಸಂಬಂಧಿಸಿದ ಕೆಲಸದಲ್ಲಿ ಜಯ ಸಿಗಲಿದೆ. ಕಲಾವಿದರಿಗೆ ಒಳ್ಳೆಯ ದಿನ.
ಕುಂಭ: ಸರ್ಕಾರಿ ನೌಕರರಿಗೆ ಉನ್ನತ ಸ್ಥಾನಮಾನ ಸಿಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮೀನ: ಉದ್ಯೋಗ ಸ್ಥಳದಲ್ಲಿ ಸಣ್ಣಪುಟ್ಟ ಸಮಸ್ಯೆ ಯಿಂದಾಗಿ ಹಿತಶತ್ರುಗಳ ಬಗ್ಗೆ ಮಾಹಿತಿ ಸಿಗಲಿದೆ.

RELATED ARTICLES

Latest News