ನಿತ್ಯ ನೀತಿ : ನಾನಿಲ್ಲದೆ ನೀನು ಬದುಕಲು ಸಾಧ್ಯವಿಲ್ಲ ಎಂದು ಹೇಳುವ ಹಕ್ಕು ಕೇವಲ ಹಣಕ್ಕೆ ಮಾತ್ರ ಇದೆ. ಮನುಷ್ಯನಿಗೆ ಇಲ್ಲ.
ಪಂಚಾಂಗ : ಶುಕ್ರವಾರ, 13-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಪೂರ್ವಾಷಾಢ / ಯೋಗ: ಶುಕ್ಲ / ಕರಣ: ವಣಿಜ್
ಸೂರ್ಯೋದಯ : ಬೆ.05.53
ಸೂರ್ಯಾಸ್ತ : 06.46
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00
ರಾಶಿ ಭವಿಷ್ಯ
ಮೇಷ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ವೃಷಭ: ನಿಮ್ಮ ಸ್ವಭಾವದಲ್ಲಿ ಬದಲಾವಣೆಯಾಗ ಬೇಕು. ತಾಳ್ಮೆ- ಸಂಯಮ ತಂದುಕೊಳ್ಳಬೇಕು.
ಮಿಥುನ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ಕಟಕ: ಕಾನೂನು ತೊಡಕು ಎದುರಿಸಬೇಕಾದ ಸಂದರ್ಭ ಬರಬಹುದು. ಸಾಲಕ್ಕೆ ಜಾಮೀನಾಗಿ ನಿಲ್ಲದಿರಿ.
ಸಿಂಹ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ಕನ್ಯಾ: ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ಸುಖದಲ್ಲಿ ಮೈ ಮರೆಯದಿರಿ.
ತುಲಾ: ಆರೋಗ್ಯಸಮಸ್ಯೆ ಗಳು ಎದುರಾಗಬಹುದು.
ವೃಶ್ಚಿಕ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.
ಧನುಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.
ಮಕರ: ಶತ್ರುಗಳ ಕಾಟ ಇರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಕುಂಭ: ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುವುದಿಲ್ಲ.
ಮೀನ: ಸೋದರ ಸಂಬಂಧಿಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.