Saturday, April 20, 2024
Homeರಾಷ್ಟ್ರೀಯನ್ಯಾಯಾಧೀಶರ ಕಾರಲ್ಲಿ ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ABVP ಕಾರ್ಯಕರ್ತರಿಗೆ ಜಾಮೀನು ನಿರಾಕರಣೆ

ನ್ಯಾಯಾಧೀಶರ ಕಾರಲ್ಲಿ ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ABVP ಕಾರ್ಯಕರ್ತರಿಗೆ ಜಾಮೀನು ನಿರಾಕರಣೆ

ಗ್ವಾಲಿಯರ್, ಡಿ 15 (ಪಿಟಿಐ) : ಖಾಸಗಿ ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿದ್ದ ಅಸ್ವಸ್ಥ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ರೈಲ್ವೆ ನಿಲ್ದಾಣದ ಹೊರಗೆ ನಿಲ್ಲಿಸಿದ್ದ ಹೈಕೋರ್ಟ್ ನ್ಯಾಯಾಧೀಶರ ಕಾರನ್ನು ಬಲವಂತವಾಗಿ ಕೊಂಡೊಯ್ದ ಆರೋಪದಲ್ಲಿ ಬಂಧಿತರಾಗಿದ್ದ ಇಬ್ಬರು ಎಬಿವಿಪಿ ಕಾರ್ಯಕರ್ತರಿಗೆ ಮಧ್ಯಪ್ರದೇಶದ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗ್ವಾಲಿಯರ್ ಕಾರ್ಯದರ್ಶಿ ಹಿಮಾಂಶು ಶ್ರೋತ್ರಿಯಾ (22) ಮತ್ತು ಉಪ ಕಾರ್ಯದರ್ಶಿ ಸುಕೃತ್ ಶರ್ಮಾ (24) ಅವರ ಜಾಮೀನು ಅರ್ಜಿಯನ್ನು ಡಕಾಯಿತಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಸಂಜಯ್ ಗೋಯಲ್ ಅವರು ತಿರಸ್ಕರಿಸಿದ್ದಾರೆ, ಒಬ್ಬರು ಬಲವಂತದಿಂದ ಅಲ್ಲ ಸೌಜನ್ಯದಿಂದ ಸಹಾಯವನ್ನು ಕೋರುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚುವರಿ ಸರ್ಕಾರಿ ಅಭಿಯೋಜಕ ಸಚಿನ್ ಅಗರವಾಲ್ ಪ್ರಕಾರ, ಶ್ರೋತ್ರಿಯಾ ಮತ್ತು ಶರ್ಮಾ ಅವರನ್ನು ಸೋಮವಾರ ಬಂಸಲಾಯಿತು ಮತ್ತು ಗ್ವಾಲಿಯರ್ ರೈಲ್ವೇ ನಿಲ್ದಾಣದಲ್ಲಿ ಕಾರಿನ ಚಾಲಕನಿಂದ ಕಾರಿನ ಕೀಯನ್ನು ಕಸಿದುಕೊಂಡ ನಂತರ, ಡಕಾಯಿತಿ ವಿರೋಧಿ ಕಾನೂನು ಅನಿಯಮ ಕಾಯ್ದೆ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಕೇಂದ್ರದಲ್ಲಿ ಮೋದಿ ಹ್ಯಾಟ್ರಿಕ್ ಸರ್ಕಾರ ಗ್ಯಾರಂಟಿ : ಸಮೀಕ್ಷೆ

ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸ್ ಕೇಸ್ ಡೈರಿಯನ್ನು ಉಲ್ಲೇಖಿಸಿದ ನ್ಯಾಯಾಧೀಶ ಗೋಯಲ್ , ಆರೋಪಿಗಳು ಅಸ್ವಸ್ಥ ವ್ಯಕ್ತಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸುವ ವೇಳೆಗೆ ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪಿತ್ತು ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಸೂಕ್ತ ವಾಹನವಾಗಿತ್ತು ಎಂದು ಉಲ್ಲೇಖಿಸಿದ್ದಾರೆ.

ಏತನ್ಮಧ್ಯೆ, ಕಾರ್ಯಕರ್ತರ ವಿರುದ್ಧದ ಅನ್ಯಾಯವನ್ನು ಖಂಡಿಸಿ ಎಬಿವಿಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದೆ.

RELATED ARTICLES

Latest News