Sunday, April 28, 2024
Homeರಾಜ್ಯಸುಧೀರ್ ಕುಮಾರ್ ಮುರೊಳ್ಳಿಗೆ ದಕ್ಕುತ್ತಾ ಉಡುಪಿ- ಚಿಕ್ಕಮಗಳೂರು ಟಿಕೆಟ್..?

ಸುಧೀರ್ ಕುಮಾರ್ ಮುರೊಳ್ಳಿಗೆ ದಕ್ಕುತ್ತಾ ಉಡುಪಿ- ಚಿಕ್ಕಮಗಳೂರು ಟಿಕೆಟ್..?

ಬೆಂಗಳೂರು, ಮಾ.12- ಉಡುಪಿ- ಚಿಕ್ಕಮಗಳೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಸುಧೀರ್ ಕುಮಾರ್ ಮುರೊಳಿ ಅವರು ನೆನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಯಾದ ರಣದೀಪ್ ಸಿಂಗ್ ಸುರ್ಜೇವಾಲ ಇವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಗೊಳಿಸುವ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನೆಡದ ಸ್ಕ್ರೀನಿಂಗ್ ಕಮಿಟಿ ಸಭೆಯ ಸಂದರ್ಭದಲ್ಲಿ ಸುರ್ಜೇವಾಲ ಅವರನ್ನ ಭೇಟಿ ಮಾಡಿದ ಸುೀರ್ ಕುಮಾರ್ ಮುರೊಳಿ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣಾ ಕ್ಷೇತ್ರಕ್ಕೆ ಸ್ಪರ್ಧೆಗೆ ಅವಕಾಶಕ್ಕೆ ಮನವಿ ಮಾಡಿದ್ದಾರೆ.

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಮತ್ತಿತರರು ಇವರೊಂದಿಗೆ ತೆರಳಿ ಸುರ್ಜೇವಾಲ ಅವರೊಂದಿಗೆ ಚರ್ಚೆ ನಡೆಸಿ ಸುಧೀರ್ ಕುಮಾರ್ ಪರ ಬ್ಯಾಟಿಂಗ್ ಬೀಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗಗಳ ಮಾಜಿ ಅಧ್ಯಕ್ಷರಾಗಿರುವ ಇಂದು ಕಾಂಗ್ರೆಸ್ ಸೇರುತ್ತಿರುವ ಕೆ. ಜಯಪ್ರಕಾಶ್ ಹೆಗಡೆ ಅವರನ್ನ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕಣಕ್ಕೆ ಇಳಿಸಲು ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಆದರೆ ಸುೀರ್ ಮುರೊಳಿ ಅವರು ತಮಗೆ ಟಿಕೆಟ್‍ಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಸ್ಥಳೀಯ ಮುಖಂಡರು ಇವರ ಬೆಂಬಲಕ್ಕೆ ನಿಂತ್ತಿದ್ದಾರೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕು.

RELATED ARTICLES

Latest News