Saturday, April 27, 2024
Homeರಾಜ್ಯಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೆ ಮಾದರಿ : ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೆ ಮಾದರಿ : ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ,ಜ.18- ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಬಣ್ಣಿಸಿದರು. ಉಡುಪಿಯ ಶ್ರೀಕೃಷ್ಣ ಮಠದ ರಾಜಾÁಂಗಣದಲ್ಲಿ ನಡೆದ ಶ್ರೀ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಡುಪಿ ಪರ್ಯಾಯ ಕಾರ್ಯಕ್ರಮ ನೋಡಿ ನಿಜಕ್ಕೂ ಬೆರಗಾದೆ.

ಸಾಂಸ್ಕೃತಿಕವಾಗಿ ಸಾಕಷ್ಟು ಶ್ರೀಮಂತಿಕೆ ಹೊಂದಿದೆ ಎಂದರು. ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಉಡುಪಿ ಅನೇಕ ವೈಶಿಷ್ಟ್ಯಗಳಿಂದ ಕೂಡಿದೆ. ಇಂತಹ ಜಿಲ್ಲೆಗೆ ಉಸ್ತುವಾರಿ ಸಚಿವೆಯಾಗಿ ಸೇವೆ ಸಲ್ಲಿಸುವ ಸೌಭಾಗ್ಯ ನನ್ನ ಪಾಲಿಗೆ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಶ್ರೀ ಪುತ್ತಿಗೆ ಪರ್ಯಾಯೋತ್ಸವದ ಅಂಗವಾಗಿ ನಡೆದ ಮೆರವಣಿಗೆ ಹಾಗೂ ಕಾರ್ಯಕ್ರಮವು ಮೈಸೂರು ದಸರಾದ ವೈಭವ ನೆನಪಿಸುತ್ತದೆ. ಇದನೆಲ್ಲಾ ನೋಡಿದರೆ ಸಾಂಸ್ಕೃತಿಕವಾಗಿ ಭಾರತ ಸಾಕಷ್ಟು ಶ್ರೀಮಂತವಾಗಿದೆ. ಭಾರತ ಸಾಂಸ್ಕೃತಿಕವಾಗಿ ವಿಶ್ವಗುರು ಆಗುವ ಪಥದತ್ತ ಸಾಗಿದೆ ಎಂದು ಅಭಿಪ್ರಾಯಪಟ್ಟರು.

ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಿದೆ. ಪರ್ಯಾಯ ಕಾರ್ಯಕ್ರಮ ಮುಗಿಯುವವರೆಗೂ ಜಿಲ್ಲಾಡಳಿತ ಸಂಪೂರ್ಣ ಸಹಕಾರವನ್ನು ನೀಡಲಿದೆ ಎಂದು ಭರವಸೆ ನೀಡಿದರು. ಉಡುಪಿಯ ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ಭಾರತೀಯ ಸಂಸ್ಕೃತಿ ಬಗ್ಗೆ ವಿದೇಶಿಗರಿಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ

ಸಚಿವರ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ:
ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅವರಿಗೆ ಅಭಿನಂದನೆ ಸಲ್ಲಿಸಿದ ಪುತ್ತಿಗೆ ಮಠಾೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಸಚಿವರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಚಿವರಾಗಿ ಬಂದಿರುವುದಕ್ಕಿಂತ ಹೆಚ್ಚಾಗಿ, ಕೃಷ್ಣ ಭಕ್ತೆಯಾಗಿ ಕುಟುಂಬ ಸಮೇತ ಪರ್ಯಾಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಆರಂಭಿಕ ಹಂತದಿಂದಲೂ ಸಚಿವರು ಪರ್ಯಾಯದ ಯಶಸ್ಸಿಗೆ ಶ್ರಮಿಸಿದ್ದಾರೆ ಎಂದು ಹೇಳಿದರು.

ಚಿನ್ನದ ರಥ ನೀಡುವ ಸಂಕಲ್ಪ : ತಾವು ನಾಲ್ಕನೇ ಬಾರಿಗೆ ಪರ್ಯಾಯ ಅಲಂಕರಿಸುತ್ತಿದ್ದು, ಸನ್ಯಾಸ ಆಶ್ರಮ ಪೂರೈಸಿ 50 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಕೃಷ್ಣನಿಗೆ ಚಿನ್ನದ ರಥ ಸಮರ್ಪಿಸುವ ಸಂಕಲ್ಪ ಹೊಂದಿದ್ದೇನೆ ಎಂದರು. ವಿದೇಶ ಪ್ರವಾಸ ಕ್ಕಿಂತ ಕೃಷ್ಣ ಪೂಜೆಯೇ ಮುಖ್ಯವಾಗಿದ್ದು, ಈ ಎರಡು ವರ್ಷಗಳ ಪರ್ಯಾಯದ ಅವಯಲ್ಲಿ ಸಂಪೂರ್ಣ ಸಮಯವನ್ನು ಕೃಷ್ಣನ ಪೂಜೆಗೆ ಮೀಸಲಿಡುವೆ ಎಂದು ಹೇಳಿದರು.

ಈ ವೇಳೆ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಧರ್ಮಸ್ಥಳದ ಧರ್ಮಾಕಾರಿ ಡಾ.ವೀರೇಂದ್ರ ಹೆಗ್ಗಡೆ, ಇಸ್ಕಾನ್ ಮುಖ್ಯಸ್ಥ ಮಧುಪಂಡಿತ್ ದಾಸ್, ಮಾಜಿ ಸಿಎಂ .ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

RELATED ARTICLES

Latest News