Sunday, August 3, 2025
Homeಜಿಲ್ಲಾ ಸುದ್ದಿಗಳು | District Newsಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣು

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣು

Undertrial prisoner commits suicide in Shivamogga Central Jail

ಶಿವಮೊಗ್ಗ,ಆ.3- ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಬಸವರಾಜ್‌(38) ಎಂಬ ಕೈದಿ ಜೈಲಿನ ಶರಾವತಿ ವಾರ್ಡ್‌ನ ಕೊಠಡಿ ಸಂಖ್ಯೆ 42ರಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಜೈಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಶಿವಮೊಗ್ಗ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ. ಜೈಲಿನ ಭದ್ರತೆಯ ನಡುವೆಯೂ ಈ ಘಟನೆ ನಡೆದಿರುವುದು ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಿವಾಸಿಯಾಗಿದ್ದ ಬಸವರಾಜ್‌ ಬಳ್ಳಾರಿ ಗಣಿಯಲ್ಲಿ ಲಾರಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಜೂ.11ರಂದು ತನ್ನ ಪತ್ನಿ ಮಂಜುಳಾ ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿ ಜೂ.13ರಂದು ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ವಿಚಾರಣೆಗೊಳಗಾಗಿದ್ದ ಈತ ತೀವ್ರ ಮಾನಸಿಕ ಒತ್ತಡದಲ್ಲಿದ್ದ ಎಂದು ತಿಳಿದುಬಂದಿದೆ.

RELATED ARTICLES

Latest News