Friday, May 3, 2024
Homeರಾಷ್ಟ್ರೀಯಇಂಡಿಯಾ ಬಣದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ : ಅನುರಾಗ್ ಠಾಕೂರ್

ಇಂಡಿಯಾ ಬಣದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ : ಅನುರಾಗ್ ಠಾಕೂರ್

ಲಕ್ನೋ, ಜ 27- ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಇಂಡಿಯಾ ಒಕ್ಕೂಟದಲ್ಲಿ ಕೆಲವರಿಗೆ ತಮ್ಮದೇ ಆದ ಮೈತ್ರಿಯಲ್ಲಿ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಲಕ್ನೋದಲ್ಲಿ 19ನೇ ಏಷ್ಯನ್ ಮತ್ತು 4ನೇ ಪ್ಯಾರಾ ಮತ್ತು ರಾಷ್ಟ್ರೀಯ ಕ್ರೀಡಾಕೂಟದ ಬಹುಮಾನ ವಿತರಣೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಠಾಕೂರ್ ಈ ಹೇಳಿಕೆ ನೀಡಿದ್ದಾರೆ.

ಕೆಲವರಿಗೆ ತಮ್ಮದೇ ಆದ ಮೈತ್ರಿಯಲ್ಲಿ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಮತ್ತು ಇದರಿಂದಾಗಿ ಒಂದರ ನಂತರ ಒಂದರಂತೆ ರಾಜ್ಯಗಳಲ್ಲಿ ಏನಾಗುತ್ತಿದೆ ಎಂಬುದನ್ನು ನೀವು ನೋಡಬಹುದು ಎಂದು ಠಾಕೂರ್ ಸುದ್ದಿಗಾರರಿಗೆ ತಿಳಿಸಿದರು. ಬಿಹಾರದಲ್ಲಿ ಮಹಾಘಟಬಂಧನ್ ನಲ್ಲಿ ಬಿರುಕು ಮೂಡಿದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಸಚಿವರ ಈ ಹೇಳಿಕೆ ಹೊರಬಿದ್ದಿದೆ.

ಮದರಸಾಗಳಲ್ಲಿ ರಾಮಯಣ ಕಥೆ ಮತ್ತು ಆದರ್ಶಗಳ ಬೋಧನೆಗೆ ಮುಂದಾದ ಉತ್ತರಾಖಂಡ ಸರ್ಕಾರ

ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಂದು ವೋಲ್ಟï-ಫೇಸ್ ಮಾಡಿ ಬಿಜೆಪಿ ನೇತೃತ್ವದ ಎನ್‍ಡಿಎಗೆ ಮರಳಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲೇ ಠಾಕೂರ್ ಅವರ ಹೇಳಿಕೆ ಮಹತ್ವಪಡೆದುಕೊಂಡಿದೆ. 500 ವರ್ಷಗಳ ಕಾಯುವಿಕೆ ಮುಗಿದಿದೆ. ಭವ್ಯವಾದ ರಾಮ ಮಂದಿರದ ನಿರ್ಮಾಣ ಪೂರ್ಣಗೊಂಡಿದೆ ಎಂದು ಯುವ ವ್ಯವಹಾರಗಳು ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಠಾಕೂರ್ ಹೇಳಿದರು.

ಬಿಜೆಪಿ ನಾಯಕರು ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದರು, ನಿತೀಶ್ ಕುಮಾರ್ ಅವರ ಇಂಡಿಯಾ ಒಕ್ಕೂಟದ ಪಾಲುದಾರರೊಂದಿಗಿನ ಸಂಬಂಧವು ಹೆಚ್ಚು ಬಲವಾಗಿರದ ಕಾರಣ ಪಕ್ಷವು ಮತ್ತೊಮ್ಮೆ ಅವರೊಂದಿಗೆ ಕೈಜೋಡಿಸಲು ಮುಕ್ತವಾಗಿದೆ ಎಂಬ ಸಂಕೇತಗಳನ್ನು ರವಾನಿಸಿದ್ದಾರೆ.

RELATED ARTICLES

Latest News