ಅತಿಥಿ ಗೃಹಕ್ಕೆ ಬೀಗ : ವಿಶ್ರಾಂತಿಗೆ ಬಂದಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬೇಸರ

ನಂಜನಗೂಡು, ಜು.28- ಬೆಳಗ್ಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಶಾಕ್‌ ಕಾದಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಲ್ಪ ವಿಶ್ರಾಂತಿ ಪಡೆಯಲು ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹಕ್ಕೆ ಆಗಮಿಸಿದಾಗ ಬೀಗ ಜಡಿಯಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳನ್ನು ಕೇಳಿದಾಗ ಅಧಿಕಾರಿಗಳು ಬೀಗ ಹಾಕಿಕೊಂಡು ಹೋಗಿದ್ದಾರೆ ಎಂದು ಹೇಳಿದ್ದಾರೆ. ಸುಮಾರು 15 ನಿಮಿಷ ಅಲ್ಲಿ ಕಾದರೂ ಯಾರೂ ಬರದಿದ್ದಾಗ ಎಚ್‌ಡಿಕೆ ಬೇಸರಿದಂದಲೇ ಮೈಸೂರಿಗೆ ತೆರಳಿದರು. ಈ … Continue reading ಅತಿಥಿ ಗೃಹಕ್ಕೆ ಬೀಗ : ವಿಶ್ರಾಂತಿಗೆ ಬಂದಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬೇಸರ