ಹುಬ್ಬಳ್ಳಿ,ಅ.10- ಹುಬ್ಬಳ್ಳಿ- ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲು ಮತ್ತೆ ಪ್ರಾರಂಭವಾಗಲಿದ್ದು, ನಾಳೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಸಿರು ನಿಶಾನೆ ತೋರಲಿದ್ದಾರೆ. ಇದು ಸಾಪ್ತಾಹಿಕ ರೈಲಾಗಿದ್ದು, ಇದರೊಂದಿಗೆ ರೈಲ್ವೆ ನಿಲ್ದಾಣದ 3ನೇ ಪ್ರವೇಶದ್ವಾರ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸಚಿವರು ಲೋಕಾರ್ಪಣೆ ಮಾಡಲಿ ದ್ದಾರೆ.
ಬೆಳಗ್ಗೆ 11 ಗಂಟೆಗೆ ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ¾ಸವಾಯಿ ಗಂಧರ್ವರ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಲಿದ್ದು, ಮಧ್ಯಾಹ್ನ 12.30ಕ್ಕೆ 20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಗೊಂಡಿರುವ ಧಾರವಾಡ ರೈಲ್ವೆ ನಿಲ್ದಾಣ, ಮಧ್ಯಾಹ್ನ 3ಕ್ಕೆ . 115 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹುಬ್ಬಳ್ಳಿ ರೈಲ್ವೆ ನಿಲ್ದಾಣದ 3ನೇ ಪ್ರವೇಶ ದ್ವಾರ ಲೋಕಾರ್ಪಣೆಗೊಳ್ಳುತ್ತಿವೆ.
#ಹೊಸ ರೈಲು:
ಈ ಹಿಂದೆ ಇದ್ದ ಹುಬ್ಬಳ್ಳಿ-ನಿಜಾಮುದ್ದೀನ್ ಲಿಂಕ್ ರೈಲನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರಿಗೆ ತೊಂದರೆ ಯಾಗಿತ್ತು. ಇದನ್ನರಿತ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತೆ ರೈಲು ಓಡಿಸುವಂತೆ ಒತ್ತಾಯಿಸಿದ್ದರು. ಹೀಗಾಗಿ ಮಂಗಳವಾರ ರೈಲು ಸಂಚಾರ ಆರಂಭವಾಗಲಿದೆ.
# ಧಾರವಾಡ ರೈಲ್ವೆ ನಿಲ್ದಾಣ:
20 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಧಾರವಾಡ ರೈಲ್ವೆ ನಿಲ್ದಾಣ ಆಧುನಿಕ ವಾಸ್ತುಶಿಲ್ಪ ಸಂಯೋಜನೆ ಒಳಗೊಂಡಿದೆ. 1936ರಲ್ಲಿ ಅಂದಿನ ಮದ್ರಾಸ್ ದಕ್ಷಿಣ ಮರಾಠಾ ರೈಲ್ವೆ ವತಿಯಿಂದ ನಿಲ್ದಾಣ ನಿರ್ಮಿಸ ಲಾಗಿತ್ತು. 2018ರಲ್ಲಿ ಈ ರೈಲ್ವೆ ನಿಲ್ದಾಣವನ್ನು 19.05 ಕೋಟಿ ವೆಚ್ಚದಲ್ಲಿ ನವೀಕರಿಸಲಾಗಿತ್ತ. ಈ ನಿಲ್ದಾಣಕ್ಕೆ ರವೀಂದ್ರನಾಥ ಟ್ಯಾಗೂರ್ ಭೇಟಿ ನೀಡಿದ ಸ್ಮರಣಾರ್ಥ ಪ್ಲಾಟ್ಫಾರಂ 1ರಲ್ಲಿ ಟ್ಯಾಗೂರ್ ವಾಟಿಕಾ ಎಂದು ನಾಮಕರಣ ಮಾಡಿ ಪುತ್ಥಳಿ ಪ್ರತಿಷ್ಠಾಪಿಸಲಾಗಿದೆ.
# ಮೂರನೇ ಪ್ರವೇಶ ದ್ವಾರ:
ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ 3ನೇ ಪ್ರವೇಶ ದ್ವಾರ ನಿರ್ಮಾಣ ಪೂರ್ಣಗೊಂಡಿದೆ. ಮಂಟೂರು ರಸ್ತೆಯಲ್ಲಿ ನಿರ್ಮಿಸಿ ರುವ ಈ ದ್ವಾರದಿಂದ ರೈಲ್ವೆ ನಿಲ್ದಾಣ ವನ್ನು ಮೂರು ದಿಕ್ಕಿನಿಂದಲೂ ಪ್ರಯಾಣಿಕರು ಪ್ರವೇಶಿಸಲು ಹಾಗೂ ನಿರ್ಗಮಿಸಲು ಅವಕಾಶ ಕಲ್ಪಿಸಿದಂತೆ ಆಗಿದೆ.
ಇದು ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದ್ದು ಜನದಟ್ಟಣೆಯ ನಿಯಂತ್ರಣಸ ಸಹ ಮಾಡಬಹುದಾಗಿದೆ ಎಂದು ಶ್ರೀ ಸಿದ್ಧಾರೂಡ ನೈರುತ್ಯ ರೈಲ್ವೆ ವಿಭಾಗದಲ್ಲಿ ಸಾರ್ವಜನಿಕ ಸಂಪರ್ಕ ಅಕಾರಿ ಅನೀಷ್ ಹೆಗಡೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಹಾಗೂ ಯಶವಂತ ಪುರ ನಿಲ್ದಾಣ ಹೊರತುಪಡಿಸಿದರೆ 3ನೇ ಪ್ರವೇಶದ್ವಾರ ಹೊಂದಿರು ವುದು ಹುಬ್ಬಳ್ಳಿಯಲ್ಲಿ ಮಾತ್ರ. ಈ ನಿಲ್ದಾಣದಲ್ಲಿ ಈ ಮೊದಲು 5 ಪ್ಲಾಟ್ ಫಾರಂಗಳಿದ್ದವು.
ಇದೀಗ ಅವುಗಳ ಸಂಖ್ಯೆ 8ಕ್ಕೇರಿದೆ. 1505 ಮೀಟರ್ ಉದ್ದದ ಪ್ಲಾಟ್ ಫಾರ್ಂನಲ್ಲಿ ರೈಲು ಹತ್ತಲು ಪ್ರಯಾಣಿಕರಿಗೆ ಅನುಕೂಲವಾಗಲೆಂಬ ಉದ್ದೇಶ ದಿಂದ 3ನೇ ಪ್ರವೇಶದ್ವಾರ ನಿರ್ಮಿಸ ಲಾಗಿದೆ. ನೂತನ ಪ್ರವೇಶ ದ್ವಾರವು 6,7 ಹಾಗೂ 8ನೇ ಪ್ಲಾಟ್ಫಾರಂಗೆ ಸಂಪರ್ಕ ಕಲ್ಪಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ನಡೆಯುವ ಕಾರ್ಯ ಕ್ರಮದಲ್ಲಿ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವರಾದ ಹಾಲಪ್ಪ ಆಚಾರ್, ಶಂಕರ ಪಾಟೀಲ ಮುನೇನ ಕೊಪ್ಪ ಸೇರಿದಂತೆ ಜನಪ್ರತಿನಿಗಳೆಲ್ಲರೂ ಭಾಗವಹಿಸಲಿದ್ದಾರೆ.