Sunday, May 5, 2024
Homeರಾಷ್ಟ್ರೀಯಪತ್ನಿ ಮತ್ತು ಇಬ್ಬರು ಪುತ್ರರನ್ನು ಕೊಂದು ತಂದೆ ಆತ್ಮಹತ್ಯೆ

ಪತ್ನಿ ಮತ್ತು ಇಬ್ಬರು ಪುತ್ರರನ್ನು ಕೊಂದು ತಂದೆ ಆತ್ಮಹತ್ಯೆ

ಬಲ್ಲಿಯಾ, ಡಿ 11 (ಪಿಟಿಐ) ಕೌಟುಂಬಿಕ ಕಲಹಗಳಿಂದಾಗಿ 35 ವರ್ಷದ ವ್ಯಕ್ತಿಯೊಬ್ಬರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಸಂಭವಿಸಿದೆ.

ಶಶಿಕಲಾ (30) ಮತ್ತು ಅವರ ಇಬ್ಬರು ಮಕ್ಕಳಾದ ಸೂರ್ಯ ರಾವ್ (7) ಮತ್ತು ಮಿತ್ತು (4 ತಿಂಗಳು) ಅವರ ಮೃತದೇಹಗಳು ದೇವದೀ ಗ್ರಾಮದ ಅವರ ಮನೆಯ ಮುಂಭಾಗದ ತೋಟದಲ್ಲಿ ಪತ್ತೆಯಾಗಿದ್ದು, ಶ್ರವಣ್ ರಾಮ್ (35) ಸಮೀಪದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್ ಆನಂದ್ ತಿಳಿಸಿದ್ದಾರೆ.

ಮೂವರನ್ನು ಯಾವುದೋ ಹರಿತವಾದ ಆಯುಧದಿಂದ ಹತ್ಯೆಗೈದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದರು.ರಾಮ್ ಅವರ ಜೇಬಿನಿಂದ ಆತ್ಮಹತ್ಯೆ ಪತ್ರವೊಂದು ಪೊಲೀಸರಿಗೆ ಸಿಕ್ಕಿದ್ದು, ಅದರಲ್ಲಿ ಕೌಟುಂಬಿಕ ಕಲಹದಿಂದ ಕುಟುಂಬವನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾನೆ.

ಹಮಾಸ್‌ನಿಂದ ಒತ್ತೆಯಾಳುಗಳ ನರಮೇಧದ ಬೆದರಿಕೆ, ಬಾಂಬ್ ದಾಳಿ ಮೂಲಕ ಇಸ್ರೇಲ್ ಉತ್ತರ

ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ರಾಮ್ ಮತ್ತು ಆತನ ಪತ್ನಿ ನಡುವೆ ಕೌಟುಂಬಿಕ ಕಲಹ ಪ್ರಕರಣ ನಡೆಯುತ್ತಿದೆ ಎಂದು ರಾಮ್ ಅವರ ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ. ಭಾನುವಾರವೂ ದಂಪತಿ ನಡುವೆ ಯಾವುದೋ ವಿಷಯಕ್ಕೆ ಜಗಳವಾಗಿದ್ದು, ನಂತರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News