ಲಕ್ನೋ, ಅ.25- ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ವೇಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಬೇಬಿ ರಾಣಿಮೌರ್ಯ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ನಿನ್ನೆ ರಾತ್ರಿ ಲಕ್ನೋಗೆ ತೆರಳುತ್ತಿದ್ದಾಗ ಸಚಿವರ ಕಾರಿನ ಮುಂದೆ ಸಾಗುತ್ತಿದ್ದ ಟ್ರಕ್ನ ಒಂದು ಟೈರು ಇದ್ದಕ್ಕಿದ್ದಂತೆ ಸಿಡಿದಿದೆ. ಬಳಿಕ ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.
ಕೂಡಲೇ ಚಾಲಕ ಕಾರನ್ನು ರಸ್ತೆ ಬದಿಗೆ ತಂದಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಅಪಘಾತದಲ್ಲಿ ಕಾರಿಗೆ ಭಾರಿ ಹಾನಿಯಾಗಿದ್ದು, ಸಚಿವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಅತ್ರಾಸ್ ಜಿಲ್ಲೆಯ ಹಲವೆಡೆ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಲಕ್ನೋಗೆ ವಾಪಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಚಿವರನ್ನು ಅಧಿಕಾರಿಗಳು ಮತ್ತೊಂದು ಕಾರಿನಲ್ಲಿ ಲಕ್ನೋಗೆ ಕಳುಹಿಸಿದ್ದಾರೆ. ಎಕ್್ಸಪ್ರೆಸ್ವೇನಲ್ಲಿ ಅಪಘಾತಗಳನ್ನು ತಡೆಗಟ್ಟಲು ಕಠಿಣಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
