ಮುಜಾಫರ್ನಗರ (ಯುಪಿ), ಜ. 9 – ಅಕ್ರಮವಾಗಿ ದೇಶ ನಿರ್ಮಿತ ಶಸ್ತ್ರಾಸ್ತ್ರಗಳ ತಯಾರಿಕೆ ಮತ್ತು ಪೂರೈಕೆಯಲ್ಲಿ ತೊಡಗಿದ್ದ ಕಳ್ಳ ಅಡ್ಡೆಯನ್ನು ಉತ್ತರ ಪ್ರದೇಶ ಪೊಲೀಸರು ಭೇಧಿಸಿದ್ದಾರೆ. ಮೂವರನ್ನು ಬಂಧಿಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಒ.ಪಿ ಸಿಂಗ್ ತಿಳಿಸಿದ್ದಾರೆ.
ಇದೇ ಜಿಲ್ಲೆಯವರಾದ ಸೌಕಿನ್, ಫುರ್ಕನ್ ಮತ್ತು ಆರಿಫ್ ಅವರನ್ನು ಬಂಧಿಸಿದ್ದು , ಗ್ಯಾಂಗ್ನ ಮತ್ತೊಬ್ಬ ಸದಸ್ಯ ಜಸ್ಬೀರ್ ಪರಾರಿಯಾಗಿದ್ದು ಆತನ ಸೆರೆಹಿಡಿಯಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು
ಮುಜಾಫರ್ನಗರ ಜಿಲ್ಲೆಯ ಕೈರಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾವ್ಟಿ ಗ್ರಾಮದಲ್ಲಿ ಈ ಅಕ್ರಮ ದಂಧೆ ನಡೆಯುತ್ತಿತ್ತು ಆರೋಪಿಗಳು ಅಕ್ರಮ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮತ್ತು ತಯಾರಿಕೆಯಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.
ದಾವಣಗೆರೆಯಲ್ಲಿ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನ ಭೀಕರ ಹತ್ಯೆ
ಉತ್ತರ ಪ್ರದೇಶ ಮತ್ತು ಹರಿಯಾಣದ ಗಡಿ ಪ್ರದೇಶಗಳಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸಿ ಅಡ್ಡೆಗಳಿದ್ದು ಅದನ್ನು ಪತ್ತೆ ಹಚ್ಚಲು ಪೊಲೀಸರಿಗೆ ವ್ಯಾಪಕ ಕಾರ್ಯಾಚರನೆ ನಡೆಸಿದ್ದಾರೆ.
UP police, busts, illegal arms, supply, gang,