Tuesday, May 21, 2024
Homeರಾಷ್ಟ್ರೀಯಕೇವಲ 30ರೂ. ವಿಚಾರಕ್ಕೆ ಬಾಲಕನ ಕೊಲೆ

ಕೇವಲ 30ರೂ. ವಿಚಾರಕ್ಕೆ ಬಾಲಕನ ಕೊಲೆ

ಬಾಗ್‍ಪತ್, ಸೆ 30 (ಪಿಟಿಐ) – ಕೇವಲ 30 ರೂ.ಗಳ ವಿಚಾರಕ್ಕೆ ಉತ್ತರಪ್ರದೇಶದ ಗ್ರಾಮವೊಂದರಲ್ಲಿ 17 ವರ್ಷದ ಯುವಕನೊಬ್ಬನನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಬಾಗ್‍ಪತ್ ಜಿಲ್ಲೆಯ ಬರೌತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಆರೋಪಿಗಳು 11 ನೇ ತರಗತಿ ವಿದ್ಯಾರ್ಥಿಯನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಗ್ರಾಮದ ಕೆಎಚ್‍ಆರ್ ಇಂಟರ್ ಕಾಲೇಜಿನ ವಿದ್ಯಾರ್ಥಿ ಹೃತಿಕ್ ಎಂದು ಗುರುತಿಸಲಾಗಿದೆ ಎಂದು ಬರೌತ್ ಸ್ಟೇಷನ್ ಹೌಸ್ ಆಫೀಸರ್ (ಎಸ್‍ಎಚ್‍ಒ) ದೇವೇಶ್ ಕುಮಾರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ. ಹೃತಿಕ್ ಅದೇ ಗ್ರಾಮದ ಮೂವರೊಂದಿಗೆ 30 ರೂಪಾಯಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದು, ವಿವಾದ ಉಲ್ಬಣಗೊಂಡು ಆರೋಪಿಗಳು ಹೃತಿಕ್ ನನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.

BIG NEWS : ದೆಹಲಿಯಲ್ಲಿ ಐಸಿಸ್ ಶಂಕಿತ ಉಗ್ರರು, ರಕ್ತದೋಕುಳಿಗೆ ಪ್ಲಾನ್..!

ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಆರೋಪಿಗಳು ಹೃತಿಕ್ ಅವರನ್ನು ತಿಳಿದಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ ಮತ್ತು ಅವರ ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ ಎಂದು ಹೇಳಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News