Thursday, May 2, 2024
Homeಅಂತಾರಾಷ್ಟ್ರೀಯನಿಜ್ಜರ್ ಹತ್ಯೆ ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಅಮೆರಿಕ ಮನವಿ

ನಿಜ್ಜರ್ ಹತ್ಯೆ ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಅಮೆರಿಕ ಮನವಿ

ವಾಷಿಂಗ್ಟನ್,ಅ 3 (ಪಿಟಿಐ)- ಖಲಿಸ್ತಾನಿ ಪ್ರತ್ಯೇಕತಾವಾದಿಯ ಸಾವಿನ ತನಿಖೆಯಲ್ಲಿ ಕೆನಡಾದೊಂದಿಗೆ ಸಹಕರಿಸುವಂತೆ ಬಿಡೆನ್ ಆಡಳಿತವು ಭಾರತ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿಕೊಂಡಿದೆ ಎಂದು ಯುಎಸ್ ಸ್ಟೇಟ್ ಡಿಪಾಟ್ರ್ಮೆಂಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂನ್‍ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಒಳಗೊಳ್ಳುವಿಕೆಯ ಬಗ್ಗೆ ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ದ್ವಿಪಕ್ಷೀಯ ಸಂಬಂಧದ ನಡುವೆ ಬಿರುಕು ಮೂಡಿದೆ.

ಭಾರತವು ಈ ಅಸಂಬದ್ಧ ಮತ್ತು ಪ್ರೇರಣೆ ಎಂದು ಆರೋಪಗಳನ್ನು ತಿರಸ್ಕರಿಸಿದೆ ಮತ್ತು ಪ್ರಕರಣಕ್ಕೆ ಸಂಬಂ„ಸಿದಂತೆ ಭಾರತೀಯ ಅ„ಕಾರಿಯನ್ನು ಒಟ್ಟಾವಾ ಉಚ್ಚಾಟನೆಗೆ ಕ್ರಮದಲ್ಲಿ ಹಿರಿಯ ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದೆ.

ಆಂಧ್ರ ಸಿಎಂ ಒಬ್ಬ ಹುಚ್ಚ, ಅವನಿಂದ ಯಾರಿಗೂ ಪ್ರಯೋಜವಿಲ್ಲ : ನಾರಾ ಲೋಕೇಶ್

ಕಳೆದ ವಾರ ಇಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಕೆನಡಾದಲ್ಲಿ ನಿಜ್ಜರ್ ಹತ್ಯೆಯ ವಿಷಯವನ್ನು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಪ್ರಸ್ತಾಪಿಸಿದರು.

ಅವರು ಸ್ಪಷ್ಟಪಡಿಸಿದಂತೆ, ನಾನು ಈಗ ಪುನರುಚ್ಚರಿಸುತ್ತೇನೆ, ಈ ಪ್ರಶ್ನೆಗೆ ನಾವು ನಮ್ಮ ಕೆನಡಾದ ಸಹೋದ್ಯೋಗಿಗಳೊಂದಿಗೆ ನಿಕಟ ಸಮನ್ವಯದಲ್ಲಿದ್ದೇವೆ ಎಂದು ಪಾಕಿಸ್ತಾನಿಯೊಬ್ಬರು ಎತ್ತಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸೋಮವಾರ ತಮ್ಮ ದೈನಂದಿನ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

RELATED ARTICLES

Latest News