Friday, May 17, 2024
Homeರಾಷ್ಟ್ರೀಯಸಿಲಿಂಡರ್‌ಗೆ ಬೆಂಕಿ ತಗುಲಿ ಒಂದೇ ಕುಟುಂಬದ ಮೂವರು ಸಾವು

ಸಿಲಿಂಡರ್‌ಗೆ ಬೆಂಕಿ ತಗುಲಿ ಒಂದೇ ಕುಟುಂಬದ ಮೂವರು ಸಾವು

ಲಕ್ನೋ,ಅ.20-ಅಡುಗೆ ಅನಿಲ ಸಿಲಿಂಡರ್‌ಗೆ ಬೆಂಕಿ ತಗುಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬದೋನ್ ಜಿಲ್ಲೆಯಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ ಉಜಾನಿ ಪಟ್ಟಣದ ಮೊಹಲ್ಲಾ ಗಡ್ಡಿ ತೋಲಾದಲ್ಲಿ ನಡೆದ ಈ ಘಟನೆಯಲ್ಲಿ ಕುಟುಂಬದ ಇಬ್ಬರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರನ್ನು ಸುಖ್ಬೀರ್ ಮೌರ್ಯ (35) ಮತ್ತು ಅವರ ಮಕ್ಕಳಾದ ಗೋಪಾಲ್ (8) ಮತ್ತು ಯಶ್ (6) ಎಂದು ಗುರುತಿಸಲಾಗಿದೆ. ಅವರ ಪತ್ನಿ ಮತ್ತು ತಾಯಿಯು ಆಹಾರ ತಯಾರಿಸುವಾಗ ಬೆಂಕಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಒ ಪಿ ಸಿಂಗ್ ತಿಳಿಸಿದ್ದಾರೆ.

ಮಧ್ಯಪ್ರದೇಶದ ಪ್ರಸ್ತುತ 230 ಶಾಸಕರಲ್ಲಿ 186 ಮಂದಿ ಕೋಟ್ಯಾಧಿಪತಿಗಳು

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದರು.
ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಮನೆಯ ನೆಲ ಮಹಡಿಯಲ್ಲಿ ವಾಸಿಸುತ್ತಿರುವ ಮೌರ್ಯ ಅವರ ಹಿರಿಯ ಸಹೋದರ ಭೂಪ್ ಸಿಂಗ್ ಹೇಳಿದ್ದಾರೆ.

ಬೆಂಕಿ ಹೊತ್ತಿಕೊಂಡ ನಂತರ ಮೌರ್ಯ ಅವರ ಪತ್ನಿ ಎಚ್ಚರಿಕೆ ನೀಡಿದರು. ಎಲ್ಲರೂ ಮೇಲಕ್ಕೆ ಧಾವಿಸಿದರು, ಅಲ್ಲಿ ಮೌರ್ಯ ಮತ್ತು ಅವರ ಮಕ್ಕಳು ಕೋಣೆಯಲ್ಲಿ ಸಿಕ್ಕಿಬಿದ್ದರು ಎಂದು ಸಿಂಗ್ ಹೇಳಿದರು.ಸಿಲಿಂಡರ್ ಹೊರತೆಗೆಯಲು ಯತ್ನಿಸಿದರೂ ಅದು ಸಿಲುಕಿ ಬೆಂಕಿ ವ್ಯಾಪಿಸಿತು. ವಿಧಿವಿಜ್ಞಾನ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ತನಿಖೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News