Saturday, May 11, 2024
Homeರಾಷ್ಟ್ರೀಯಅಪ್ರಾಪ್ತ ಸಹೋದರಿಯರನ್ನು ಕತ್ತು ಸೀಳಿ ಕೊಂದ ಹಂತಕರು

ಅಪ್ರಾಪ್ತ ಸಹೋದರಿಯರನ್ನು ಕತ್ತು ಸೀಳಿ ಕೊಂದ ಹಂತಕರು

ಇಟಾವಾ,ಅ.9- ನಾಲ್ಕು ಮತ್ತು ಏಳು ವರ್ಷ ವಯಸ್ಸಿನ ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ. ಬಲರಾಯ್ ಪೊಲೀಸ್ ಠಾಣಾ ವ್ಯಾಪ್ತಿಯ ಬಹದ್ದೂರ್‍ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬದ ನಿಕಟವರ್ತಿ ಯಾರೋ ಅವರನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಜೈವೀರ್ ಸಿಂಗ್ ಎಂಬುವವರ ಪುತ್ರಿಯರಾದ ಸುರಭಿ (7) ಮತ್ತು ರೋಶ್ನಿ (4) ಅವರ ಮೃತದೇಹಗಳು ಸಂಜೆ ಅವರ ಮನೆಯ ಪ್ರತ್ಯೇಕ ಕೊಠಡಿಗಳಲ್ಲಿ ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ. ಘಟನೆ ನಡೆದಾಗ ಜೈವೀರ್ ಅವರ ಪತ್ನಿ ಮತ್ತು ಅವರ ಹಿರಿಯ ಮಕ್ಕಳು ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯಲ್ಲಿ ಬೈಕ್‍ನಲ್ಲಿ ಬಂದ ವ್ಯಕ್ತಿಗಳಿಂದ ಹಂಗೇರಿ ಪ್ರಜೆಯ ದರೋಡೆ

ಕುಟುಂಬದಿಂದ ಯಾವುದೇ ಆರೋಪಿಯನ್ನು ಇನ್ನೂ ಗುರುತಿಸಲಾಗಿಲ್ಲ. ಪ್ರಾಥಮಿಕ ದೃಷ್ಟಿಯಲ್ಲಿ, ಕುಟುಂಬಕ್ಕೆ ಹತ್ತಿರವಿರುವ ಯಾರೋ ಸಹೋದರಿಯರನ್ನು ಒಬ್ಬಂಟಿಯಾಗಿ ಕಂಡು ನಂತರ ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತೋರುತ್ತದೆ ಎಂದು ಶಂಕಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ.

RELATED ARTICLES

Latest News