Sunday, May 19, 2024
Homeರಾಷ್ಟ್ರೀಯಕಾಳಿ ನದಿಗೆ ಉರುಳಿದ ಕಾರು, 6 ಮಂದಿ ಸಾವು

ಕಾಳಿ ನದಿಗೆ ಉರುಳಿದ ಕಾರು, 6 ಮಂದಿ ಸಾವು

ಡೆಹ್ರಾಡೂನ್,ಅ.25- ಆದಿ ಕೈಲಾಸನ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಸಂಭವಿಸಿದ ದುರಂತದಲ್ಲಿ ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಲಖನ್ಪುರ ಕಾಳಿ ನದಿಗೆ ಬಿದ್ದು ಆರು ಮಂದಿ ದುರ್ಮರಣ ಹೊಂದಿದ್ದಾರೆ.

ಯಾತ್ರಿಕರು ಆದಿ ಕೈಲಾಸದಿಂದ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದರು, ಕತ್ತಲೆ ಮತ್ತು ಸವಾಲಿನ ಭೂಪ್ರದೇಶದ ಕಾರಣ, ಶವಗಳ ಹೊರತೆಗೆಯುವಿಕೆ ಇನ್ನೂ ಪ್ರಾರಂಭವಾಗಿಲ್ಲ ಎಂದು
ಪಿಥೋರಗಢ್ನ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ವರ್ ಸಿಂಗ್ ತಿಳಿಸಿದ್ದಾರೆ.

ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್ ಕಾರು ಅಪಘಾತ

ಆದಿ ಕೈಲಾಸನ ದರ್ಶನಕ್ಕೆ ತೆರಳಿದ್ದ 6 ಯಾತ್ರಿಕರ ಪೈಕಿ ಇಬ್ಬರು ಬೆಂಗಳೂರಿನವರು, ಇಬ್ಬರು ತೆಲಂಗಾಣದವರು ಮತ್ತು ಇಬ್ಬರು ಉತ್ತರಾಖಂಡದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸ್ಪಂದಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಘಟನೆ ಸಂಜೆ ವೇಳೆ ಸಂಭವಿಸಿದ ಕಾರಣ ಸದ್ಯದ ಪರಿಸ್ಥಿತಿಯಲ್ಲಿ ಮೃತದೇಹಗಳನ್ನು ಹೊರತೆಗೆಯುವ ಕೆಲಸವನ್ನು ಪ್ರಾರಂಭಿಸಲು ಸಾಧ್ಯವಾಗಲಿಲ್ಲ. ಶೋಧ ಕಾರ್ಯ ಆರಂಭವಾಗಲಿದೆ ಎಂದು ಎಸ್ಪಿ ಹೇಳಿದ್ದಾರೆ.

RELATED ARTICLES

Latest News