Saturday, October 26, 2024
Homeಬೆಂಗಳೂರುದೇವೇಗೌಡ - ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಧನಕರ್ ದಂಪತಿ

ದೇವೇಗೌಡ – ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಧನಕರ್ ದಂಪತಿ

V-P Jagdeep Dhankhar meets former PM HD Deve Gowda in Bengaluru

ಬೆಂಗಳೂರು, ಅ.26- ಉಪ ರಾಷ್ಟಪತಿ ಜಗದೀಪ್ ಧನಕರ್ ಅವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಸುದೇಶ್ ಧನಕರ್ ಅವರೊಂದಿಗೆ ಇಂದು ಬೆಳಿಗ್ಗೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಳಗ್ಗೆ 9 ಗಂಟೆಗೆ ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ಉಪ ರಾಷ್ಟ್ರ ಪತಿಗಳು, ಒಂದು ಗಂಟೆಗೂ ಹೆಚ್ಚು ಕಾಲ ಇದ್ದು, ಶ್ರೀಮತಿ ಚನ್ನಮ್ಮ ಅವರ ಆರೋಗ್ಯದ ಬಗ್ಗೆ ದೇವೇಗೌಡರಲ್ಲಿ ವಿಚಾರಿಸಿದರು.

ಚನ್ನಮ್ಮ ಅವರು ಆದಷ್ಟು ಬೇಗ ಗುಣಮಖರಾಗಲಿ, ಆ ನಂತರ ಅವರನ್ನು ತಾವು ದೆಹಲಿಗೆ ಕರೆದುಕೊಂಡು ಬನ್ನಿ ಎಂದು ಉಪ ರಾಷ್ಟ್ರ ಪತಿಗಳು, ಮಾಜಿ ಪ್ರಧಾನಿಗಳಿಗೆ ತಿಳಿಸಿದರು. ಇದಕ್ಕೆ ಮಾಜಿ ಪ್ರಧಾನಿಗಳು ಸಮ್ಮತಿಸಿ, ತಮ್ಮ ಮೇಲೆ ತಾವು ಇರಿಸಿರುವ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನನ್ನ ಹೃದಯ ತುಂಬಿ ಬಂದಿದೆ. ತಮ್ಮ ಆಗಮನ ನಮ್ಮ ಇಡೀ ಕುಟುಂಬಕ್ಕೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಉಪ ರಾಷ್ಟ ಪತಿಗಳಿಗೆ ಕೃತಜ್ಞತೆ ಸಲ್ಲಿಸಿದರು.ಉಪ ರಾಷ್ಟçಪತಿ, ಶ್ರೀಮತಿ ಸುದೇಶ್ ಧನಕರ್ ಅವರುಗಳು ಮಾಜಿ ಪ್ರಧಾನಿಗಳು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆಯಲ್ಲಿಯೇ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಅವರೆಲ್ಲರೂ ರಾಷ್ಟದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಕುಟುಂಬದ ಎಲ್ಲಾ ಸದಸ್ಯರ ಕುಶಲೋಪರಿ ವಿಚಾರಿಸಿದರು. ವಿಶೇಷವಾಗಿ ಪುಟ್ಟ ಮಕ್ಕಳ ಜತೆ ಉಪ ರಾಷ್ಟ್ರ ಪತಿಗಳು ಕೆಲ ಕಾಲ ಕಳೆದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ಉಪ ರಾಷ್ಟ್ರ ಪತಿಗಳನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬರಮಾಡಿಕೊಂಡರು.

ಉಪ ರಾಷ್ಟ್ರ ಪತಿಗಳನ್ನು ಬೀಳ್ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಉಪ ರಾಷ್ಟ್ರ ಪತಿಗಳು ಹಾಗೂ ಮಾಜಿ ಪ್ರಧಾನಿಗಳ ನಡುವೆ ಸ್ನೇಹಪೂರ್ವಕ ಬಾಂಧವ್ಯ ಇದೆ. ಇಬ್ಬರೂ ಪರಸ್ಪರ ಗೌರವಭಾವ ಇರಿಸಿಕೊಂಡಿದ್ದು, ಅದರಲ್ಲಿಯೂ ಉಪ ರಾಷ್ಟ್ರ ಪತಿಗಳು ಗೌಡರ ಬಗ್ಗೆ ಅತ್ಯಂತ ಗೌರವ ಇರಿಸಿಕೊಂಡಿದ್ದಾರೆ. ಇದನ್ನು ಆನೇಕ ಸಲ ಕಣ್ಣಾರೆ ಕಂಡಿದ್ದೇನೆ ಎಂದರು.

ಇಬ್ಬರೂ ನಾಯಕರು ರೈತ ಕುಟುಂಬದ ಹಿನ್ನೆಲೆಯಿಂದ ಬಂದವರು. ಹೀಗಾಗಿ ಅವರಿಬ್ಬರ ಚರ್ಚೆ ಬಹುತೇಕ ಕೃಷಿ ಕೇಂದ್ರಿತವಾಗಿತ್ತು. ರೈತರ ಅಭಿವೃದ್ಧಿಯ ಬಗ್ಗೆ ಅವರು ಅನೇಕ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಅವರು ಮಾಹಿತಿ ಹಂಚಿಕೊಂಡರು.
ಅಲ್ಲದೆ, ಉಪ ರಾಷ್ಟ್ರ ಪತಿಗಳು ಅನೇಕ ಸಲ ಬೆಂಗಳೂರಿಗೆ ಬಂದಾಗ ದೇವೇಗೌಡರ ನಿವಾಸಕ್ಕೆ ಭೇಟಿ ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ ಇವತ್ತು ಭೇಟಿ ನೀಡಿದ್ದಾರೆ.

ವಿಶೇಷವಾಗಿ ಉಪ ರಾಷ್ಟ್ರ ಪತಿಗಳು ನಮ್ಮ ತಾಯಿಯವರ ಆರೋಗ್ಯ ವಿಚಾರಿಸಿ, ಆದಷ್ಟು ಬೇಗ ಗುಣಮುಖರಾಗಬೇಕು ಎಂದು ಹಾರೈಸಿದರು. ಅವರು ತೋರಿದ ಪ್ರೀತಿ ವಿಶ್ವಾಸ ಅಭಿಮಾನಕ್ಕೆ ನಮ್ಮ ಕುಟುಂಬ ಚಿರಋಣಿ ಆಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

RELATED ARTICLES

Latest News