ಬೆಂಗಳೂರು, ಜೂನ್ 05- ಸಿದ್ಧತೆ ಮಾಡಿಕೊಳ್ಳದೆ ಸರ್ಕಾರ ಕಾರ್ಯಾಕ್ರಮ ಆಯೋಜನೆಗೆ ರಾಜ್ಯ ಹೈಕೋರ್ಟ್ ತರಾಟೆಗೆ ತೆಗೆದುಕೊಂಡು ಹಲವು ಪ್ರಶ್ನೆಗಳನ್ನು ಕೇಳಿದೆ. ಇಂತಹ ಘಟನೆ ತಡೆಗೆ ಎಸ್ಪಿ ಇರಬೇಕಲ್ಲವೇ. ವೈದ್ಯಕೀಯ ಸಿಬ್ಬಂದಿ, ಆ್ಯಂಬುಲೆನ್ಸ್ ವ್ಯವಸ್ಥೆ ಇರಬೇಕಲ್ಲವೇ?ಎಂದು ಸರ್ಕಾರಕ್ಕೆ ಹಂಗಾಮಿ ಸಿಜೆ ವಿ.ಕಾಮೇಶ್ವರ ರಾವ್ ನೇತೃತ್ವದ ಪೀಠ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದೆ. ಕಾಲ್ತುಳಿತವಾದಾಗ ಏನು ಮಾಡಬೇಕೆಂಬ ಬಗ್ಗೆ ಸಿದ್ದ ಇರಬೇಕಲ್ಲವೇ? ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಬೇಕಲ್ಲವೇ? ಇಂತಹ ಮಾರ್ಗಸೂಚಿ ಏನಾದರೂ ಪಾಲಿಸಿದ್ದೀರಾ ಎಂದು ಯೋಜನೆ ಯಡವಟ್ಟಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡು ಇಂದು ಮಧ್ಯಹ್ನ ವಿಚಾರಣೆ ನಡೆಸಿ ಸರ್ಕಾರಕ್ಕೆ ಚಾಟಿ ಬೀಸಿದೆ.
ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ ಹೈಕೋರ್ಟ್ ನೀಡುವ ಸಲಹೆಗಳನ್ನು ಪಾಲಿಸಲು ಸರ್ಕಾರ ಬದ್ಧವಾಗಿದೆ. ನಾವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಪ್ರತಿರೋಧಿಸುವುದಿಲ್ಲ ಎಂದು ಹೇಳಿದರು. ಜೂನ್ 3ರಂದು ಆರ್ಸಿಬಿ ಐಪಿಎಲ್ ಮ್ಯಾಚ್ ಗೆಲುವು ಸಾಧಿಸಿತು. ಭದ್ರತೆಗಾಗಿ ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದರು. ಬಂದೋಬಸ್ತ್ ಗಾಗಿ 1,643 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ವಾಟರ್ ಟ್ಯಾಂಕರ್,ಕೆಎಸ್ಆರ್ಪಿ ತುಕಡಿ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿತ್ತು.
ನಿನ್ನೆ ಕೂಡ 1,600 ಪೊಲೀಸ್ ಸಿಬ್ಬಂದಿ ನೇಮಿಸಲಾಗಿತ್ತು ಎಂದು ವಾದದಲ್ಲಿ ತಿಳಿಸಿದ್ದಾರೆ. ಕಾಲ್ತುಳಿತ ಸಂಭವಿಸಿ 56 ಜನರು ಗಾಯಗೊಂಡಿದ್ದರು ಅದರಲ್ಲಿ ಐವರು ಮಹಿಳೆಯರು ಹಾಗೂ 6 ಪುರುಷರು ಮೃತಪಟ್ಟಿದ್ದಾರೆ. ಕೋಲಾರ, ಉತ್ತರ ಕನ್ನಡ, ತುಮಕೂರು,ಯಾದಗಿರಿ, ಮಂಡ್ಯದಿಂದಲೂ ಬೆಂಗಳೂರಿಗೆ ಜನ ಬಂದಿದ್ದರು.
ಒಟ್ಟು ನಿನ್ನೆ ಬೆಂಗಳೂರಿಗೆ 2.5 ಲಕ್ಷ ಜನರು ಬಂದಿದ್ದರು ಎಂದು ಕೋರ್ಟ್ಗೆ ತಿಳಿಸಿದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 34,600 ಜನರಿಗಷ್ಟೇ ವ್ಯವಸ್ಥೆ ಇದೆ. 33 ಸಾವಿರ ಜನರಿಗಷ್ಟೇ ಟಿಕೆಟ್ ನೀಡುತ್ತಾರೆ. ಆದರೆ ನಿನ್ನೆ ಎರಡೂವರೆ ಲಕ್ಷ ಜನರು ಬಂದಿದ್ದರು ಎಂದರು.ಇಂತಹ ದೊಡ್ಡ ಕಾರ್ಯಕ್ರಮ ನಡೆದಾಗ ಪೂರ್ವ ಸಿದ್ದತೆ ಏನಿತ್ತು?೦ಬಬ ಪೀಠದ ಪ್ರಶ್ನೆಗೆ ಎಜಿ ಅವರು, ರಾಯಲ್ ಚಾಲೆಂಜರ್ಸ್ ಟಿಕೆಟ್ ಹಂಚಿಕೆ ಮಾಡುತ್ತದೆ. ಸ್ಟೇಡಿಯಂನ ಎಲ್ಲಾ ವ್ಯವಸ್ಥೆ ಅವರೇ ಮಾಡುತ್ತಾರೆ.
ಬೆಂಗಳೂರಿನೆಲ್ಲೆಡೆ ಬೆಳಗಿನ ಜಾವ 4 ಗಂಟೆಯಿಂದಲೇ ಜನ ಬರುತ್ತಿದ್ದರು. 3 ಗಂಟೆಯೊಳಗೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನದಟ್ಟಣೆಯಾಗಿತ್ತು. ರಾಜ್ಯವಲ್ಲದೇ ಅನ್ಯ ರಾಜ್ಯದಿಂದಲೂ ಜನ ಬಂದಿದ್ದರು ಎಂದು ಮಾಹಿತಿ ನೀಡಿದರು. ವಕೀಲ ಅರುಣ್ ಶ್ಯಾಮ್ ವಾದ ಮಂಡಿದಿ ಆರ್ಸಿಬಿ ಆಟಗಾರರು ರಾಜ್ಯ, ದೇಶಕ್ಕೆ ಆಡುತ್ತಿಲ್ಲ. ರಾಜ್ಯ ಸರ್ಕಾರ ಇವರನ್ನು ಗೌರವಿಸುವ ಅಗತ್ಯವಿರಲಿಲ್ಲ ವಿಧಾನಸೌಧ, ಚಿನ್ನಸ್ವಾಮಿ
ಸ್ಟೇಡಿಯಂ ಎರಡೂ ಕಡೆ ಕಾರ್ಯಕ್ರಮ ಮಾಡಲಾಗಿದೆ.
ಇದರಿಂದ ಸಮಸ್ಯೆಯಾಗಿದೆ. ಎರಡು ಕಡೆ ಸಮಾರಂಭ ಮಾಡಿದ್ದಾರೆ. ಎಲ್ಲೆಲ್ಲಿ ಆ್ಯಂಬುಲೆನ್ಸ್ ಇತ್ತು, ಎಷ್ಟು ಭದ್ರತೆ ಇತ್ತು? ಸರ್ಕಾರ ಇದನ್ನು ಸ್ಪಷ್ಟಪಡಿಸಬೇಕು. ತನಿಖೆ ನಡೆಸಬೇಕು ಎಂದು ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದರು. ಇದಕ್ಕೆ ಹೈಕೋರ್ಟ್ ಪ್ರತಿಕ್ರಿಯಿಸಿ, ನಾವು ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿತು.