Sunday, May 12, 2024
Homeರಾಜ್ಯವಿಧಾನಪರಿಷತ್ ಚುನಾವಣೆ ಬಗ್ಗೆ ಜೆಡಿಎಸ್ ನಾಯಕರ ಜೊತೆ ಚರ್ಚೆ : ವಿಜಯೇಂದ್ರ

ವಿಧಾನಪರಿಷತ್ ಚುನಾವಣೆ ಬಗ್ಗೆ ಜೆಡಿಎಸ್ ನಾಯಕರ ಜೊತೆ ಚರ್ಚೆ : ವಿಜಯೇಂದ್ರ

ಬೆಂಗಳೂರು, ಜ.21- ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಿರಿಯರು ಸಭೆ ಸೇರಿ ವಿಧಾನಪರಿಷತ್‍ನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ, ಮುಂದಿನ ವಿಧಾನಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆ ಕುರಿತು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾಗಿ ಚರ್ಚೆ ಆಗಿದೆ. ಚರ್ಚಿತ ಅಂಶಗಳ ಕುರಿತಂತೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಅತಿ ಶೀಘ್ರವೇ ಅಭ್ಯರ್ಥಿಗಳ ಘೋಷಣೆಗೆ ತೀರ್ಮಾನಿಸಿದ್ದೇವೆ. ಅರ್ಥಪೂರ್ಣ ಚರ್ಚೆ ನಡೆದಿದೆ. ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗಲು ಯಾವುದೇ ಸಮಸ್ಯೆ ಇಲ್ಲ ಎಂದು ನುಡಿದರು.

ಧರ್ಮದ ವಿಚಾರಗಳು ಪ್ರಚಾರದ ಸರಕುಗಳಲ್ಲ : ಡಿಕೆಶಿ ತಿರುಗೇಟು

ಲೋಕಸಭೆ ಚುನಾವಣೆ ಸಂಬಂಧ ಮುಂದಿನ ದಿನಗಳಲ್ಲಿ ವರಿಷ್ಠರು ಚರ್ಚಿಸಲಿದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು, ಜಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ಸೇರಿ ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ವಿಷಯದಲ್ಲಿ ಗೊಂದಲ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾದ ಚರ್ಚೆ ಆಗಿದೆ ಎಂದು ಅವರು ತಿಳಿಸಿದರು.

ರಜೆ ಪ್ರಕಟಿಸಲು ಆಗ್ರಹ: ನಾಳೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಾರ್ವಜನಿಕ ರಜೆ ಘೋಷಿಸಬೇಕು ಎಂದು ಅವರು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಲಾದರೂ ಈ ಕುರಿತು ನಿರ್ಧಾರ ಮಾಡಬೇಕಿದೆ ಎಂದು ಅವರು ಒತ್ತಾಯಿಸಿದರು.

RELATED ARTICLES

Latest News