ಬೆಂಗಳೂರು,ಸೆ.1- ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ವ್ಯವಸ್ಥಿತ ಷಡ್ಯಂತ್ರ ನಡೆಸಿರುವ ದುಷ್ಟಶಕ್ತಿಗಳು ಸಂಹಾರ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ಯಾವ ಶಕ್ತಿಗಳು ವ್ಯವಸ್ಥಿತ ಪಿತೂರಿ ನಡೆಸಿದ್ದಾರೋ ಅವರು ಸಂಹಾರ ಆಗಲೇಬೇಕು. ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಬಿಜೆಪಿ ಹೋರಾಟ ಮತ್ತಷ್ಟು ತೀವ್ರವಾಗಲಿದೆ ಎಂದು ಎಚ್ಚರಿಸಿದರು.
ಧರ್ಮಸ್ಥಳದ ವಿರುದ್ದ ಷಡ್ಯಂತ್ರ ರೂಪಿಸಿ ಅಪಪ್ರಚಾರ ಮಾಡಿದವರನ್ನು ಮಟ್ಟ ಹಾಕಬೇಕು ಎಂಬುದು ನಮ ಅಪೇಕ್ಷ. ಅಪಪ್ರಚಾರಗಳಿಗೆ ಇತಿಶ್ರೀ ಹಾಡಬೇಕು ಎಂದರು. ಕಿಡಿಗೇಡಿಗಳು ಜಾತಿ, ಧರ್ಮದ ಮೂಲಕ ತಮ ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದಾರೆ. ಇವರ ಅಪಪ್ರಚಾರದಿಂದಾಗಿ ಕೋಟ್ಯಾಂತರ ಭಕ್ತರು ಕಣ್ಣೀರು ಹಾಕ್ತಿದ್ದಾರೆ. ಇದಕ್ಕೆ ಇತಿಶ್ರೀಹಾಡಲು ಧರ್ಮಸ್ಥಳ ಚಲೋ ಹಮಿಕೊಂಡಿದ್ದೇವೆ ಎಂದು ಹೇಳಿದರು.
ಬಿಜೆಪಿಯ ಪ್ರತಿಭಟನೆಯನ್ನು ರಾಜಕೀಯ ಎಂದ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ವೇದಿಕೆಯಲ್ಲಿ ಅವರ ಆರೋಪಗಳಿಗೆ ಉತ್ತರ ಕೊಡುತ್ತೇವೆ ಎಂದು ಹೇಳಿದರು.
- ದೀಪಾವಳಿಗೆ ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದವರಿಗೆ ಶಾಕ್, ಖಾಸಗಿ ಬಸ್ ಮಾಲೀಕರಿಂದ ಮನಸೋಯಿಚ್ಛೆ ಸುಲಿಗೆ
- ವಿಚ್ಛೇದನ ನೀಡಲು ನಿರಾಕರಿಸಿದ ಪತ್ನಿಯನ್ನು ಕೊಂದ ಪೊಲೀಸಪ್ಪ ಅರೆಸ್ಟ್
- ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ; ಪುನರುಚ್ಚರಿಸಿದ ಟ್ರಂಪ್
- ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ KSRTC ಬಸ್ ಚಾಲಕ
- ಉದ್ಯಾನನಗರಿ ಬೆಂಗಳೂರಲ್ಲಿ ಹೂಡಿಕೆಗೆ ಹಿಂದೇಟು