Saturday, April 27, 2024
Homeರಾಜ್ಯನ.15ಕ್ಕೆ ವಿಜಯೇಂದ್ರ ಪದಗ್ರಹಣ, 16ಕ್ಕೆ ಕಾರ್ಯಕರ್ತರ ಬೃಹತ್ ಸಮಾವೇಶ

ನ.15ಕ್ಕೆ ವಿಜಯೇಂದ್ರ ಪದಗ್ರಹಣ, 16ಕ್ಕೆ ಕಾರ್ಯಕರ್ತರ ಬೃಹತ್ ಸಮಾವೇಶ

ಬೆಂಗಳೂರು,ನ.12- ಇದೇ ತಿಂಗಳ 15ರಂದು ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸುವುದಾಗಿ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 15ರಂದು ಜಗನ್ನಾಥ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಹಿರಿಯರ ಮಾರ್ಗದರ್ಶನದಂತೆ ಅಧಿಕಾರವನ್ನು ಸ್ವೀಕರಿಸಲಿದ್ದೇನೆ ಎಂದು ತಿಳಿಸಿದರು.

ನಿರ್ಗಮಿತ ಅಧ್ಯಕ್ಷರಾದ ನಳೀನ್‍ಕುಮಾರ್ ಕಟೀಲ್ ಅವರು ಅಧ್ಯಕ್ಷರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಸಂಘಟನೆ ಮಾಡಿ ನಮಗೆ ದೊಡ್ಡ ಗೆಲುವು ತಂದುಕೊಟ್ಟಿದ್ದರು.
ಅವರ ನೇತೃತ್ವದಲ್ಲಿ ಬಿಜೆಪಿ ಸಾಧನೆ ಮಾಡಿದೆ ಎಂದು ಬಣ್ಣಿಸಿದರು.

ನ.16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ನಡೆಸಲು ತೀರ್ಮಾನಿಸಲಾಗಿದೆ. ಪಕ್ಷಕ್ಕೆ ನವಚೈತನ್ಯ ನೀಡುವ ಉದ್ದೇಶದಿಂದ ನಾವು ಈ ತೀರ್ಮಾನಕ್ಕೆ ಬಂದಿದ್ದೇವೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಸಚಿವರಾದ ವಿ.ಸೋಮಣ್ಣ, ಗೋವಿಂದ ಕಾರಜೋಳ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಭೀಕರ ಬರಗಾಲ ಇರುವುದರಿಂದ ಇದರ ಬಗ್ಗೆ ನಮ್ಮ ಪಕ್ಷ ಮೊದಲ ಆದ್ಯತೆ ನೀಡಲಿದೆ. ಇದೇ 16ರಂದು ಶಾಸಕಾಂಗ ಸಭೆ ನಡೆಸಬೇಕೆಂಬ ತೀರ್ಮಾನಕ್ಕೆ ಬಂದಿದ್ದೇವೆ. ಪಕ್ಷದ ವರಿಷ್ಠರು ವೀಕ್ಷಕರನ್ನು ಕಳುಹಿಸಿಕೊಡಲಿದ್ದಾರೆ. ಎಲ್ಲರ ಜೊತೆ ಚರ್ಚಿಸಿ ಸರ್ವಸಮ್ಮತವಾಗಿರುವ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವುದಾಗಿ ಹೇಳಿದರು.

ಒಂದು ರಾಷ್ಟ್ರೀಯ ಪಕ್ಷ ಎಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಬಂದೇ ಬರುತ್ತವೆ. ಎಲ್ಲವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸಲಾಗುವುದು. ಯಾರನ್ನೂ ಕೂಡ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಪಕ್ಷ ಬಲವರ್ಧನೆ ಮಾಡಲಾಗುವುದು ಎಂದರು.

ಯಾರನ್ನು ಕೂಡ ಕಡೆಗಣಿಸುವ ಮಾತೇ ಇಲ್ಲ. ಕಾಂಗ್ರೆಸ್‍ನವರು ಏನೇ ಸಲಹೆ ಕೊಟ್ಟರೂ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇವೆ. ನಮಗೆ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು. ಆದರೆ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸಿದ್ದಗಂಗಾ ಮಠದಿಂದ ಪಕ್ಷದ ಕಚೇರಿಗೆ ಭೇಟಿಕೊಟ್ಟ ಅವರು ಪದಾಕಾರಿಗಳನ್ನು ಭೇಟಿಯಾದರು. ಮೊದಲ ಬಾರಿಗೆ ಪಕ್ಷದ ಜವಬ್ದಾರಿಯಂತೆ ಶಾಸಕನಾಗಿದ್ದು, ಈಗ ಅಧ್ಯಕ್ಷನಾಗುತ್ತಿದ್ದೇನೆ. ಅದಕ್ಕಿಂತ ಮಿಗಿಲಾಗಿ ನಾನೊಬ್ಬ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಎಂದರು.

ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸಿ ದುಷ್ಟ ಮತ್ತು ಭ್ರಷ ಹಾಗೂ ಬಡವರ, ರೈತ ವಿರೋ ಸರಕಾರದ ವಿರುದ್ಧ ಹೋರಾಟಕ್ಕಿಳಿಯಬೇಕಿದೆ. ಜನರಿಗೆ ಸತ್ಯಾಂಶ ತಿಳಿಸುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ಕರೆ ನೀಡಿದರು.

ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು

ನಮ್ಮ ತಂದೆ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕೆಲಸವನ್ನು ಆರಂಭಿಸುವ ಮುನ್ನ ಸಿದ್ದಗಂಗಾಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆಯುತ್ತಿದ್ದರು. ಅದೇ ರೀತಿ ನಾನು ಕೂಡ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ಬಿ.ಕೆ.ಮಂಜುನಾಥ್ , ಉಪಾಧ್ಯಕ್ಷ ಎಂ.ಬಿ.ನಂದೀಶ್, ಜಿ.ಬಿ. ಜ್ಯೋತಿ ಗಣೇಶ್, ಬಿ.ಸುರೇಶ್ ಗೌಡ , ಹುಲಿನಾಯ್ಕರ್ ಇದ್ದರು.

RELATED ARTICLES

Latest News