Thursday, May 2, 2024
Homeರಾಷ್ಟ್ರೀಯಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌

ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌

ಲಕ್ನೋ, ಜ 5- ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ ಸುಲ್ತಾನ್‍ಪುರ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧಿಯೊಬ್ಬ ಹತನಾಗಿದ್ದಾನೆ. ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಬೇಕಾಗಿದ್ದ ಆತನ ಪತ್ತೆಗೆ 1 ಲಕ್ಷ ರೂಪಾಯಿ ಬಹುಮಾನವನ್ನು ಹೊತ್ತದ್ದ ವಿನೋದ್ ಕುಮಾರ್ ಉಪಾಧ್ಯಾಯ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಶೇಷ ಕಾರ್ಯಪಡೆಯೊಂದಿಗಿನ ಎನ್‌ಕೌಂಟರ್‌ನಲ್ಲಿ ಉಪಾಧ್ಯಾಯ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಎಸ್‍ಟಿಎ ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮಿತಾಬ್ ಯಶ್ ತಿಳಿಸಿದ್ದಾರೆ.

ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ

ಗೋರಖ್‍ಪುರ, ಬಸ್ತಿ, ಸಂತ ಕಬೀರ್ ನಗರ ಮತ್ತು ಲಕ್ನೋದಲ್ಲಿ ಉಪಾಧ್ಯಾಯ ವಿರುದ್ಧ 35 ಘೋರ ಅಪರಾಧಗಳ ಪ್ರಕರಣಗಳು ದಾಖಲಾಗಿತ್ತು 2023ರ ಸೆಪ್ಟೆಂಬರ್‍ನಲ್ಲಿ ಗೋರಖ್‍ಪುರ ಪೊಲೀಸರು ಆತನ ಸುಳಿವು ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು ಆತನ ಬಳಿಇದ್ದ ಪಿಸ್ತೂಲು ಸೇರಿ ಹಲವು ಮಾರಕಾಸ ವಶಕ್ಕೆ ಪಡೆಯಲಾಗಿದೆ.

RELATED ARTICLES

Latest News