ಬೆಂಗಳೂರಿಗರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ “ಗ್ಯಾರಂಟಿ”

ಬೆಂಗಳೂರು,ಜೂ.19– ಪೆಟ್ರೋಲ್ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿ ಗಾಯದ ಮೇಲೆ ಬರೆ ಎಳೆದಿರುವ ರಾಜ್ಯಸರ್ಕಾರ ಈಗ ನೀರಿನ ದರವನ್ನು ಹೆಚ್ಚಿಸುವ ಮೂಲಕ ಬೆಂಗಳೂರಿನ ನಾಗರಿಕರಿಗೆ ಮತ್ತಷ್ಟು ಸಂಕಷ್ಟ ತಂದಿಡಲು ಮುಂದಾಗಿದೆ. ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ನೀರು ಪೂರೈಸುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸುಸ್ಥಿರತೆಗಾಗಿ ದರ ಪರಿಷ್ಕರಣೆ ಅನಿವಾರ್ಯ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ 10 ವರ್ಷಗಳಿಂದಲೂ ನೀರಿನ ದರ ಹೆಚ್ಚಳವಾಗಿಲ್ಲ. ಯಾವುದೇ ಹೊಸ … Continue reading ಬೆಂಗಳೂರಿಗರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ “ಗ್ಯಾರಂಟಿ”