Monday, May 6, 2024
Homeಬೆಂಗಳೂರುಹಲ್ಲೆ ಆರೋಪ ವಾಟರ್‌ಮ್ಯಾನ್‌ ಆತ್ಮಹತ್ಯೆ

ಹಲ್ಲೆ ಆರೋಪ ವಾಟರ್‌ಮ್ಯಾನ್‌ ಆತ್ಮಹತ್ಯೆ

ಬೆಂಗಳೂರು,ಏ.26- ಓವರ್‌ ಹೆಡ್‌ವಾಟರ್‌ ಟ್ಯಾಂಕ್‌ ಕಂಬಕ್ಕೆ ನೇಣು ಬಿಗಿದುಕೊಂಡು ವಾಟರ್‌ಮ್ಯಾನ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್‌ ತಾಲೂಕಿನ ಹುಲಿದುರ್ಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಕಿಚ್ಚವಾಡಿ ಗ್ರಾಮದ ವಾಟರ್‌ಮ್ಯಾನ್‌ ಚಂದ್ರಪ್ಪ(57) ಆತ್ಮಹತ್ಯೆಗೆ ಶರಣಾದವರು.

ಇಂದು ಮುಂಜಾನೆ ಚಂದ್ರಪ್ಪ ಅವರು ಕೆಲವರೊಂದಿಗೆ ಜಗಳವಾಡಿಕೊಂಡಿದ್ದರು. ಇದರಿಂದ ನೊಂದು ಚಂದ್ರಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.ಸುದ್ದಿ ತಿಳಿದು ಹುಲಿಯೂರುದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಚಂದ್ರಪ್ಪ ಅವರ ಮಗ ದೂರು ನೀಡಿದ್ದು, ನಮ್ಮ ತಂದೆ ಜೊತೆ ಕಾಂಗ್ರೆಸ್‌ ಕಾರ್ಯಕರ್ತರು ಜಗಳವಾಡಿ ನಿಂದಿಸಿ ಹಲ್ಲೆ ಮಾಡಿದ್ದಾರೆ. ಹಾಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News