ನವದೆಹಲಿ,ಜು.11– ಬಾಕಿ ಇರುವ ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಸಂಬಂಧಪಟ್ಟಂತೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಿನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲರ ಜೊತೆ ನಾನು, ಡಿ.ಕೆ.ಶಿವಕುಮಾರ್ ಚರ್ಚೆ ಮಾಡಿದ್ದೇವೆ. ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ಅಧ್ಯಕ್ಷರು ಹಾಗೂ ಸದಸ್ಯರನ್ನಾಗಿ ನೇಮಿಸುವ ಬಗ್ಗೆ ಚರ್ಚೆಯಾಗಿದೆ. ಆದರೆ ಯಾವುದೇ ನಿರ್ಣಯ ತೆಗೆದುಕೊಳ್ಳದೆ ಅಪೂರ್ಣವಾಗಿದೆ ಎಂದರು.
ಸುರ್ಜೇವಾಲ ಅವರು ಇದೇ ತಿಂಗಳ 16 ರಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು, ಆ ವೇಳೆ ಮತ್ತೊಂದು ಸುತ್ತಿನ ಚರ್ಚೆ ಮಾಡಿ ಪಟ್ಟಿಯನ್ನು ಅಂತಿಮಗೊಳಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
- ದಾವಣಗೆರೆ : ಸಾಲ ತೀರಿಸಲಾಗದೆ ರೈಲಿಗೆ ತಲೆಕೊಟ್ಟ ತಾಯಿ -ಮಗಳು
- ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಹತ್ಯೆ
- ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟದಲ್ಲಿ ಬಡವಾದ ಕಾರ್ಯಕರ್ತರು
- ಸಂಚಾರ ನಿಯಮ ಉಲ್ಲಂಘಿಸಿದ 10 ಶಾಲಾ ವಾಹನಗಳ ಜಪ್ತಿ
- ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ : 15 ಮಂದಿ ಸೆರೆ, 39.26 ರೂ.ಕೋಟಿ ಮೌಲ್ಯದ ನಗದು, ಆಭರಣ ಜಪ್ತಿ