Tuesday, May 13, 2025
Homeರಾಷ್ಟ್ರೀಯ | Nationalಭಯೋತ್ಪಾದನೆ ಹತ್ತಿಕ್ಕಲು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ : ಖರ್ಗೆ

ಭಯೋತ್ಪಾದನೆ ಹತ್ತಿಕ್ಕಲು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ : ಖರ್ಗೆ

We will support the central government to curb terrorism: Kharge

ಬೆಂಗಳೂರು,ಏ.23- ಜಮು-ಕಾಶೀರದಲ್ಲಿ ನಡೆದ ಉಗ್ರರ ದಾಳಿ ಅತ್ಯಂತ ಖಂಡನೀಯವಾಗಿದ್ದು, ಭಯೋತ್ಪಾದನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಕಠಿಣ ಕ್ರಮಗಳಿಗೆ ಕಾಂಗ್ರೆಸ್‌‍ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ನಗರದ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ಆಕಸಿಕವಾದ ಘಟನೆ. ಅಮಾಯಕ ಪ್ರವಾಸಿಗರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಉಗ್ರರ ದಾಳಿಯನ್ನು ಯಾರೂ ಸಮರ್ಥಿಸುವುದಿಲ್ಲ. ಇದು ನಮ ಸಂವಿಧಾನದ ಮೇಲೆ ನಡೆದ ದಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘಟನಾ ಸ್ಥಳಕ್ಕೆ ಕೇಂದ್ರ ಗೃಹಸಚಿವ ಅಮಿತ್‌ ಷಾ ತೆರಳಿದ್ದು, ಜಮು-ಕಾಶೀರದ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಮು-ಕಾಶೀರಕ್ಕೆ ಪ್ರವಾಸೋದ್ಯಮವೇ ಪ್ರಮುಖ ಆದಾಯಮೂಲವಾಗಿದ್ದು ಭಯೋತ್ಪಾದಕರ ದಾಳಿಯಿಂದ ಆದಾಯಕ್ಕೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಓಮರ್‌ ಅಬ್ದುಲ್ಲಾ ಹೇಳಿರುವುದನ್ನು ಗಮನಿಸಿದ್ದೇವೆ ಎಂದು ಖರ್ಗೆ ತಿಳಿಸಿದರು.

ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ ಪಕ್ಷ ನಾಳೆ ದೆಹಲಿಯ ಕೇಂದ್ರ ಕಚೇರಿಯಲ್ಲಿ ಕಾರ್ಯಕಾರಿ ಸಮಿತಿಯ ಸಭೆ ಕರೆಯಲಾಗಿದೆ. ಭಯೋತ್ಪಾದಕರ ಕೃತ್ಯದ ವಿರುದ್ಧ ಪಕ್ಷದಿಂದ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

ಮೃತಪಟ್ಟವರ ಕುಟುಂಬದವರಿಗೆ ತಾವು ಸಾಂತ್ವನ ಹೇಳಿದ್ದು, ಕನ್ನಡಿಗರಾದ ಮಂಜುನಾಥ್‌ ಮತ್ತು ಭರತ್‌ ಭೂಷಣ್‌ ಅವರ ಕುಟುಂಬದವರೊಂದಿಗೆ ಖುದ್ದಾಗಿ ಮಾತನಾಡಿದ್ದೇನೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕಾಶೀರಕ್ಕೆ ತೆರಳಿದ್ದು, ಈ ಕುರಿತು ವರದಿ ನೀಡುವಂತೆಯೂ ಸೂಚಿಸಲಾಗಿದೆ ಎಂದು ಹೇಳಿದರು.
ಓಮರ್‌ ಅಬ್ದುಲ್ಲಾ ಅವರೊಂದಿಗೆ ತಾವು ಮಾತುಕತೆ ನಡೆಸಿದ್ದು, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಅವರು ಸಹಕಾರ ನೀಡುತ್ತಿದ್ದಾರೆ ಎಂದರು.

ಭಯೋತ್ಪಾದನೆಯನ್ನು ಹತ್ತಿಕ್ಕಲು ಎಲ್ಲರೂ ಕೈ ಜೋಡಿಸುತ್ತೇವೆ. ದೇಶ ವಿರೋಧಿಗಳ ವಿರುದ್ಧ ನಾವೆಲ್ಲಾ ಒಂದಾಗಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ. ಭಯೋತ್ಪಾದಕರ ಕೃತ್ಯಗಳ ಬಗ್ಗೆ ಯಾವುದೇ ರಾಜಿ ಇಲ್ಲ. ದಾಳಿಯಿಂದಾಗಿ ಇಡೀ ದೇಶವೇ ಆಘಾತಕ್ಕೆ ಒಳಗಾಗಿದೆ. ಕೇಂದ್ರ ಸರ್ಕಾರ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿರುವವರನ್ನು ಸುರಕ್ಷಿತವಾಗಿ ಕರೆತರುವ ಜೊತೆಗೆ ಮುಂದೆ ಅಮರನಾಥ್‌ ಯಾತ್ರೆಗೂ ಕೂಡ ಅಗತ್ಯ ಭದ್ರತೆ ಒದಗಿಸಬೇಕು. ಭಯೋತ್ಪಾದನಾ ನಿಗ್ರಹವನ್ನು ಸವಾಲಾಗಿ ಸ್ವೀಕರಿಸಬೇಕೆಂದು ಹೇಳಿದರು.

ದೇಶದ ಭದ್ರತೆ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ. ಕೇಂದ್ರ ಸರ್ಕಾರ ಎಲ್ಲಾ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸಲಿ. ಕೆಲವರ ಸಲಹೆಗಳು ಪರಿಣಾಮಕಾರಿಯಾಗಿರಬಹುದು. ಕೇಂದ್ರ ಸರ್ಕಾರ ಅಗತ್ಯ ಎನಿಸಿದ ಸಲಹೆಗಳನ್ನು ಅನುಸರಿಸಬಹುದು. ಇಲ್ಲವಾದರೆ ಕಡೆಗಣಿಸಬಹುದು. ಸಾವು-ನೋವುಗಳನ್ನು ತಡೆಯಲು ಭಯೋತ್ಪಾದನೆಯನ್ನು ಹತ್ತಿಕ್ಕಲು ನಿರ್ದಾಕ್ಷಿಣ್ಯ ಕ್ರಮ ಅಗತ್ಯ ಎಂದರು.

ಸಂತ್ರಸ್ತ ಕುಟುಂಬದವರ ಜೊತೆ ನಾವಿದ್ದೇವೆ. ವೈಯಕ್ತಿಕವಾಗಿ ನನಗೆ ಈ ಘಟನೆಯಿಂದ ತುಂಬಾ ನೋವಾಗಿದೆ. ದೇಶ ಆತಂಕಕ್ಕೆ ಸಿಲುಕಿದೆ. ಉಗ್ರರ ಬಗ್ಗೆ ಯಾವುದೇ ಅನುಕಂಪ ತೋರಿಸದೆ ಕಠಿಣ ಸಂದೇಶ ರವಾನೆಯಾಗಬೇಕು. ಪಾಕಿಸ್ತಾನಕ್ಕೂ ಸಂದೇಶ ತಲುಪಬೇಕು ಎಂದು ಹೇಳಿದರು.

ತಮ ಪುತ್ರಿ ಆರೋಗ್ಯ ಸರಿಯಿಲ್ಲ. ಹಾಗಾಗಿ ನಾನು ವಾರಕ್ಕೊಮೆ ಬೆಂಗಳೂರಿಗೆ ಬರುತ್ತಿದ್ದೇನೆ. ಇಲ್ಲವಾದರೆ ಜಮು-ಕಾಶೀರಕ್ಕೆ ತಕ್ಷಣವೇ ಹೋಗುತ್ತಿದ್ದೆ. ಇಂದು ಸಂಜೆ ನಾನು ಅಲ್ಲಿಗೆ ಭೇಟಿ ನೀಡುತ್ತೇನೆ ಎಂದರು.

RELATED ARTICLES

Latest News