Saturday, September 20, 2025
Homeರಾಜ್ಯ331 ಹೊಸ ಜಾತಿಗಳು ಎಲ್ಲಿಂದ ಹುಟ್ಟಿಕೊಂಡವು..? : ನಿಖಿಲ್ ಕುಮಾರಸ್ವಾಮಿ

331 ಹೊಸ ಜಾತಿಗಳು ಎಲ್ಲಿಂದ ಹುಟ್ಟಿಕೊಂಡವು..? : ನಿಖಿಲ್ ಕುಮಾರಸ್ವಾಮಿ

Where did the 331 new castes originate from? : Nikhil Kumaraswamy

ಬೆಂಗಳೂರು : ಸರ್ಕಾರದಿಂದ ಸಿಗಬೇಕಾದ ಸೌಲಭ್ಯ ಸಮಾಜದ ಕಟ್ಟಕಡೆಯ ವ್ಯಕ್ತಿ ಗುರುತಿಸಿ ತಯಾರಿಸುವ ಜಾತಿಗಣತಿಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಇದು ಅವೈಜ್ಞಾನಿಕವಾಗಿ ತಯಾರಿಸಿರುವ ವರದಿ ಆಗಿದ್ದು, ವಿರೋಧಿಸುತ್ತೇವೆ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ಆದಿಚುಂಚನಗಿರಿ ಶಾಖ ಮಠದಲ್ಲಿ ಆಯೋಜಿಸಿದ್ದ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯ ನಂತರ ಮಾಧ್ಯಮಗಳ ಜೊತೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದರು.

ಸಮಾಜ ಸಮಾಜ ಜೊತೆ ಸಂಘರ್ಷ ತರಲು ರಾಜ್ಯ ಸರ್ಕಾರ ಹೊರಟಿದೆ. 331 ಹೊಸ ಜಾತಿ ಎಲ್ಲಿ ಹುಟ್ಟಿಕೊಂಡಿದೆ ಗೊತ್ತಿಲ್ಲ ಎಂದು ಜಾತಿ ಸಮೀಕ್ಷೆ ಬಗ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ವ್ಯಂಗ್ಯವಾಡಿದರು.

- Advertisement -

ಕುಮಾರಣ್ಣನವರು ಕಾಂತರಾಜು ವರದಿಯನ್ನ ರಿಜೆಕ್ಟ್ ಮಾಡ್ತಾರೇ, ಮಧೂಸುದನ್ ಅಧ್ಯಕ್ಷರಾದ 15 ದಿನದಲ್ಲಿ 2 ಕೋಟಿ ಜನರ ಮಾಹಿತಿ ಕಲೆ ಹಾಕಲು ಸಾಧ್ಯವಾ.? ಎಂದು ನಿಖಿಲ್ ಅವರು ಪ್ರಶ್ನಿಸಿದರು.

ಜಾತಿ ಸಮೀಕ್ಷೆಗಳು ಆಗಬೇಕಾಗಿರೋದು ಕಟ್ಟಕಡೆಯ ವ್ಯಕ್ತಿ ಮೇಲೆತ್ತಲು ಮಾಡಬೇಕು. ಆರ್ಥಿಕ ಮತ್ತು ಸಾಮಾಜಿಕವಾಗಿ ನ್ಯಾಯವಾದಿಸುವ ನಿಟ್ಟಿನಲ್ಲಿ ಈ ಸಮೀಕ್ಷೆಗಳು ಆಗುವದರಲ್ಲಿ ನಮ್ಮ ಸ್ವಾಗತ ಇದೆ. ಆದರೆ ಇದರ ಹಿಂದೆ ದುರುದ್ದೇಶಗಳನ್ನು ಇಟ್ಟುಕೊಂಡು ಒಂದು ಸಮುದಾಯವನ್ನು ಮೇಲೆತ್ತಿಕೊಳ್ಳುವುದಕ್ಕೆ. ಇನ್ನೊಂದು ಪ್ರಬಲ ಸಮುದಾಯದ ನಂಬರ್ ಗಳನ್ನು ಮುಂದಿಟ್ಟು ಸಮಾಜ ಸಮಾಜಗಳ ನಡುವೆ ಸಂಘರ್ಷ ಉಂಟು ಮಾಡುವುದಕ್ಕೆ ಸರ್ಕಾರ ಮುಂದಾಗಬಾರದು ಎಂದು ಹೇಳಿದರು.

ಇಲ್ಲಿ 331 ಹೊಸ ಜಾತಿಗಳು ಎಲ್ಲಿಂದ ಹುಟ್ಟಿಕೊಳ್ಳುತ್ತೋ ಗೊತ್ತಿಲ್ಲ. ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ಮಾಡಿಕೊಂಡು 180 ಕೋಟಿ ಖರ್ಚು ಮಾಡಿದರು, ಈಗ ಮಧುಸೂದನ್ ಅವರ ಅಧ್ಯಕ್ಷತೆಯಲ್ಲಿ ಹೊಸ ಆಯೋಗವನ್ನು ರಚಿಸಿ 15 ದಿನದಲ್ಲಿ 2 ಕೋಟಿ ಜನರ ಮಾಹಿತಿ ಕಲೆ ಹಾಕಲು ಸಾಧ್ಯವಾ..,? ಇಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

10 ವರ್ಷದಲ್ಲಿ ಆಗದೆ ಇರುವಂತಹ ಜಾತಿ ಸಮೀಕ್ಷೆ ಹೀಗ್ಯಾಕೆ.? ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ಮಾಡೋದಕ್ಕೆ ಅಧಿಕಾರವಿದೆ. ಆದರೆ ಅಂತಿಮವಾಗಿ ಕೇಂದ್ರ ಸರ್ಕಾರ ಜಾತಿ ಗಣತಿ ಕಾಲಂ ನನ್ನ ಸೇರಿಸಿದ್ದಾರೆ. ನಾಲ್ಕು ತಿಂಗಳಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ಇಡೀ ರಾಜ್ಯ ವ್ಯಾಪ್ತಿ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಜಾತಿಗಣತಿ ವಿಚಾರದಲ್ಲಿ ಸರ್ಕಾರ ಆಗಾಗ ಕೆಲವೊಂದಿಷ್ಟು ಹೆಜ್ಜೆಗಳನ್ನ ಇಡುವುದನ್ನು ನೋಡಿದ್ದೇವೆ.ಈ ಹಿಂದೆಯೂ ಕೂಡ ಇದೇ ರೀತಿ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ಆಡಳಿತ ಪಕ್ಷದ ಮಂತ್ರಿಗಳಲ್ಲೇ ಅಪಸ್ವರ, ಭಿನ್ನಾಭಿಪ್ರಾಯ ಇರುವುದನ್ನ ನೋಡಿದ್ದೇವೆ ಎಂದು ಹೇಳಿದರು.

ಜಾತಿಗಣತಿ ಎಲ್ಲಾ ಸಮುದಾಯದಲ್ಲಿ ಗೊಂದಲದ ವಾತಾವರಣ ಸೃಷ್ಟಿ ಮಾಡಿದೆ. ಈ ನೆಲೆಯಲ್ಲಿ ಪರಮ ಪೂಜ್ಯ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳ ನೇತೃತ್ವದಲ್ಲಿ ಸರ್ವ ಪಕ್ಷದ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ಕೆಲವೊಂದಿಷ್ಟು ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.

RELATED ARTICLES

Latest News