Friday, June 6, 2025
Homeರಾಜ್ಯಆರ್‌ಸಿಬಿ ಅಭಿಮಾನಿಗಳ ಸಾವಿಗೆ ಹೊಣೆ ಯಾರು..?

ಆರ್‌ಸಿಬಿ ಅಭಿಮಾನಿಗಳ ಸಾವಿಗೆ ಹೊಣೆ ಯಾರು..?

Who is responsible for the deaths of RCB fans?

ಬೆಂಗಳೂರು :ಆರ್‌ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಲಕ್ಷಾಂತರ ಜನ ಸಂಭ್ರಮಾಚರಣೆಗೆ ಸೇರುತ್ತಾರೆ ಎನ್ನುವ ಅಂದಾಜಿದ್ದರೂ ಕರ್ನಾಟಕ ಸರ್ಕಾರ ಹಾಗೂ ಪೊಲೀಸರು ಯಾವುದೇ ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿರಲಿಲ್ಲ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ. ಇಲಾಖೆ ವೈಫಲ್ಯವನ್ನು ಕಂಡಿತೇ ಎನ್ನುವ ಅನುಮಾನ ಕಾಡಲಾರಂಭಿಸಿದೆ.

ಚಿನ್ನಸ್ವಾಮಿ ಮೈದಾನಕ್ಕೆ ಪಾಸ್ ಇದ್ದವರನ್ನು ಮಾತ್ರ ಬಿಡಲಾಗುವುದು ಎಂದು ಹೇಳಲಾಗುತ್ತಿತ್ತು. ಆದರೆ, ಎಲ್ಲಿ ಸಂವಹನದ ಕೊರತೆ ಎದುರಾಯಿತೋ ಎನ್ನುವ ಹಾಗೇ, ಮೈದಾನದ ಒಳಗೆ ಹೋಗಲು ಭಾರೀ ನೂಕುನುಗ್ಗಲು ಶುರುವಾಯಿತು. 40 ಸಾವಿರ ಸಾಮರ್ಥ್ಯದ ಕ್ರೀಡಾಂಗಣದ ಸುತ್ತಮುತ್ತ 60 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಜಮಾಯಿಸಿದ್ದರು.

ಅಸಲಿಗೆ, ಎಚ್ಎಎಲ್ ವಿಮಾನ ನಿಲ್ದಾಣದಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಆಟಗಾರರನ್ನು ಕರೆತರುವ ಪ್ರೊಗ್ರಾಂ ಹಾಕಲಾಗಿತ್ತು. ರಾಯಲ್ ಚಾಲೆಂಜರ್ಸ್ ತಂಡ ಇದನ್ನು ತಮ್ಮ ಸಾಮಾಜಿಕ ಖಾತೆಯಲ್ಲೂ ಪ್ರಕಟಿಸಿತ್ತು. ಆದರೆ, ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲು ಸರ್ಕಾರ ಅನುಮತಿಯನ್ನು ನೀಡಿರಲಿಲ್ಲ.

ವಿಧಾನಸೌಧದ ಮುಂದೆಯೂ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಆದರೆ, ವಿಶಾಲವಾದ ಸ್ಥಳ ಮತ್ತು ಆ ಸಮಯದಲ್ಲಿ ಮಳೆ ಆರಂಭವಾದ ಹಿನ್ನಲೆಯಲ್ಲಿ 15 ನಿಮಿಷದಲ್ಲಿ ಕಾರ್ಯಕ್ರಮವನ್ನು ಮುಗಿಸಲಾಗಿತ್ತು. ಆದರೆ, ಆಟಗಾರರು ವಿಧಾನಸೌಧದಿಂದ ಚಿನ್ನಸ್ವಾಮಿಗೆ ಬರುವಷ್ಟರಲ್ಲಿ ಕಾಲ್ತುಳಿತದ ಘಟನೆ ಸಂಭವಿಸಿದೆ.

ಜನಾಕ್ರೋಶ:
ಇನ್ನು ಸೋಷಿಯಲ್‌ ಮೀಡಿಯಾದಲ್ಲಿ ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಸರ್ಕಾರವು ಯಾವುದೇ ಮುಂದಾಲೋಚನೆ ಅಥವಾ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳದೆ ಇಷ್ಟೊಂದು ದೊಡ್ಡ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.

ಆರ್‌ಸಿಬಿಯ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಲಿದ್ದಾರೆ ಎನ್ನುವ ಮುನ್ಸೂಚನೆ ಇದ್ದರೂ ಗೆದ್ದ ಬೆನ್ನಲ್ಲೇ ಈ ರೀತಿಯ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಬಾರದಿತ್ತು. ಇದಕ್ಕೆ ಇನ್ನಷ್ಟು ಪೂರ್ವ ಸಿದ್ಧತೆಗಳನ್ನು ರಾಜ್ಯ ಸರ್ಕಾರವು ಮಾಡಿಕೊಳ್ಳಬೇಕಿತ್ತು ಎನ್ನುವ ಆಗ್ರಹ ಕೇಳಿ ಬಂದಿದೆ.

ಇದಕ್ಕೆಲ್ಲವೂ ರಾಜ್ಯ ಸರ್ಕಾರವೇ ಕಾರಣ ಎಂದು ಜನ ಅಭಿಪ್ರಾಯಪಟ್ಟಿದ್ದಾರೆ. ದೊಡ್ಡ ದೊಡ್ಡ ಸಮಾವೇಶಗಳಲ್ಲಿ ಜನ ಯಾವ ರೀತಿ ಸೇರುತ್ತಾರೆ ಎನ್ನುವುದು ತಿಳಿದಿದ್ದರೂ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ.

ಚಿನ್ನಸ್ವಾಮಿ ಮೈದಾನಕ್ಕೆ ಪಾಸ್ ಇದ್ದವರನ್ನು ಮಾತ್ರ ಬಿಡಲಾಗುವುದು ಎಂದು ಹೇಳಲಾಗುತ್ತಿತ್ತು. ಆದರೆ, ಎಲ್ಲಿ ಸಂವಹನದ ಕೊರತೆ ಎದುರಾಯಿತೋ ಎನ್ನುವ ಹಾಗೇ, ಮೈದಾನದ ಒಳಗೆ ಹೋಗಲು ಭಾರೀ ನೂಕುನುಗ್ಗಲು ಶುರುವಾಯಿತು. 40 ಸಾವಿರ ಸಾಮರ್ಥ್ಯದ ಕ್ರೀಡಾಂಗಣದ ಸುತ್ತಮುತ್ತ 60 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಜಮಾಯಿಸಿದ್ದರು.

ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು, ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಹೇಳಿದ್ದಾರೆ.

RELATED ARTICLES

Latest News