Friday, September 20, 2024
Homeರಾಜ್ಯದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ ನೀಡಲು ಸೂಚಿಸಿದ್ದ ಪ್ರಭಾವಿ ಸಚಿವ ಯಾರು..?

ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ ನೀಡಲು ಸೂಚಿಸಿದ್ದ ಪ್ರಭಾವಿ ಸಚಿವ ಯಾರು..?

Who is the influential minister who suggested Darshan to be give Best Hospitality

ಬೆಂಗಳೂರು,ಆ.28- ಪ್ರಭಾವಿ ಸಚಿವರ ಸೂಚನೆ ಮೇರೆಗೆ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ರಾಜಾತಿಥ್ಯ ನೀಡಿದ್ದಾರೆಂದು ತಿಳಿದುಬಂದಿದೆ. ಈ ಪ್ರಭಾವಿ ಸಚಿವರು ದರ್ಶನ್ನನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಜೈಲಿನ ಅಧಿಕಾರಿಗಳಿಗೇ ಮೌಖಿಕವಾಗಿ ತಿಳಿಸಿದ್ದರೆಂದು ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್ಗೆ ಹೆಚ್ಚಿನ ಸವಲತ್ತುಗಳನ್ನು ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ನೀಡಿರುವುದು ಇದೀಗ ಬಹಿರಂಗಗೊಂಡಿದೆ.

ಜೈಲಿನ ಒಳಗಡೆ ಖೈದಿಗಳಿಗೆ ಹಾಗೂ ವಿಚಾರಣಾಧೀನ ಖೈದಿಗಳಿಗೆ ಯಾವುದೇ ವಸ್ತು ನೀಡಬೇಕಾದರೂ ಜೈಲಿನ ಉನ್ನತ ಅಧಿಕಾರಿಗಳ ಅನುಮತಿ ಬೇಕು. ಚೇರು, ಟಿಪಾಯಿ, ಹಾಸಿಗೆ, ಮಂಚ ಈ ರೀತಿಯ ಯಾವುದೇ ವಸ್ತುಗಳನ್ನು ನೀಡಬೇಕಾದರೂ ಅನುಮತಿ ಅಗತ್ಯ. ವೈದ್ಯರು ಸೂಚಿಸಿದರೆ ಮಾತ್ರ ಅವುಗಳನ್ನು ಕೊಡಬೇಕಾಗುತ್ತದೆ. ಇಲ್ಲದಿದ್ದರೆ ಮಾರ್ಗಸೂಚಿ ಪ್ರಕಾರವೇ ವಿಚಾರಣಾಧೀನ ಕೈದಿಗಳಿಗೆ ಸೌಲಭ್ಯ ಒದಗಿಸಬೇಕು.

ದರ್ಶನ್ಗೆ ರಾಜಾತಿಥ್ಯ ನೀಡಿದ ಫೋಟೋ ವೈರಲ್ಲಾಗುತ್ತಿದ್ದಂತೆ ಈಗಾಗಲೇ ಜೈಲಿನ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ 9 ಮಂದಿಯ ತಲೆದಂಡವೂ ಆಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತನಿಖೆ ನಡೆಸಿ ನಟ ದರ್ಶನ್ನನ್ನು ಬಂಧಿಸಿದ ಸಂದರ್ಭದಲ್ಲೇ ಈ ಪ್ರಭಾವಿ ಸಚಿವರು ಈ ಪ್ರಕರಣದಿಂದ ದರ್ಶನ್ನನ್ನು ಪಾರು ಮಾಡಲು ಇನ್ನಿಲ್ಲದ ಪ್ರಯತ್ನ ಮಾಡಿದ್ದರು.

ಮುಖ್ಯಮಂತ್ರಿ, ಗೃಹಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈ ಸಚಿವರು ಪ್ರಕರಣದಿಂದ ದರ್ಶನ್ ಅವರನ್ನು ಕೈಬಿಡುವಂತೆ ಒತ್ತಡ ಹಾಕಿದ್ದರು. ಕೊನೆಗೆ ಈ ಸಚಿವರು ಮುಖ್ಯಮಂತ್ರಿ ಹಾಗೂ ಗೃಹಸಚಿವರ ಮನೆಗೆ ಹೋಗಿ ಪರಿ ಪರಿಯಾಗಿ ಬೇಡಿಕೊಂಡಿದ್ದರು. ಆದರೆ ಅವರಿಗೆ ಸಿಎಂ ಹಾಗೂ ಗೃಹಸಚಿವರು ಬುದ್ದಿವಾದ ಹೇಳಿ ಕಳುಹಿಸಿದ್ದರು.

ತನ್ನ ಹಠ ಬಿಡದ ಸಚಿವರು ಜೈಲು ಅಧಿಕಾರಿಗಳಿಗೆ ಒತ್ತಡ ಹಾಕಿ ದರ್ಶನ್ಗೆ ರಾಜಾತಿಥ್ಯ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಈ ಪ್ರಕರಣ ಬೆಳಕಿಗೆ ಬಂದ ನಂತರ ಇದೀಗ ಈ ಸಚಿವರು ಪೇಚಿಗೆ ಸಿಲುಕಿದ್ದಾರೆ.

RELATED ARTICLES

Latest News